ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018
ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು ಮಾಡಿಸುತ್ತೇವೆ. ಇದರ ಬಗ್ಗೆ ಅನುಮಾನ ಬೇಡ ಎಂದರು.

ಸರ್ಕಾರ ಆಗ ಬೀಳುತ್ತದೆ, ಈಗ ಬೀಳುತ್ತದೆ ಎಂದು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡುತ್ತಿದ್ದಾರೆ. ಆದನ್ನು ಬಿಟ್ಟು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ ಮಧು ಬಂಗಾರಪ್ಪ, ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ರಾಮನನ್ನು ಎಳೆದು ತರುತ್ತಾರೆ. ಯಾಕೆಂದರೆ ಅವರ ಬಳಿ ಕಾಮ್ ಕೀ ಬಾತ್ ಇಲ್ಲ. ರಾಮ್ ಕೀ ಬಾತ್ ಅಷ್ಟೇ ಇದೆ ಅಂತಾ ವ್ಯಂಗ್ಯವಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





