‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018

ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

47575789 750896981938391 2760925301377597440 n.jpg? nc cat=102& nc ht=scontent bom1 1

ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು ಮಾಡಿಸುತ್ತೇವೆ. ಇದರ ಬಗ್ಗೆ ಅನುಮಾನ ಬೇಡ ಎಂದರು.

47498963 750896988605057 2729723180015943680 n.jpg? nc cat=102& nc ht=scontent bom1 1

ಸರ್ಕಾರ ಆಗ ಬೀಳುತ್ತದೆ, ಈಗ ಬೀಳುತ್ತದೆ ಎಂದು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡುತ್ತಿದ್ದಾರೆ. ಆದನ್ನು ಬಿಟ್ಟು ಯಡಿಯೂರಪ್ಪ ಅವರು ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ ಮಧು ಬಂಗಾರಪ್ಪ, ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ರಾಮನನ್ನು ಎಳೆದು ತರುತ್ತಾರೆ. ಯಾಕೆಂದರೆ ಅವರ ಬಳಿ ಕಾಮ್ ಕೀ ಬಾತ್ ಇಲ್ಲ. ರಾಮ್ ಕೀ ಬಾತ್ ಅಷ್ಟೇ ಇದೆ ಅಂತಾ ವ್ಯಂಗ್ಯವಾಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment