ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021
ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಅವರಿಂದ ಮಂಜುನಾಥಗೌಡ ಮತ್ತು ಬೆಂಬಲಿಗರು ಸದಸ್ಯತ್ವ ಪಡೆದು, ಪಕ್ಷಕ್ಕೆ ಸೇರ್ಪಡೆಯಾದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಯಾರೆಲ್ಲ ಕಾಂಗ್ರೆಸ್ ಸೇರಿದರು?
ಆರ್.ಎಂ.ಮಂಜುನಾಥಗೌಡ ಅವರೊಂದಿಗೆ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ, ಟಿ.ಎಲ್.ಸುಂದರೇಶ್, ಪಿ.ಕರಿಯಪ್ಪ, ಬಿ.ಆರ್.ರಾಘವೇಂದ್ರ ಶೆಟ್ಟಿ, ಸೈಯದ್ ಯಾಸೀನ್, ಕೆ.ಎಲ್.ಜಗದೀಶ್ವರ್, ರತ್ನಾಕರ ಶೆಟ್ಟಿ, ಟಿ.ಎನ್.ಹರೀಶ್, ಎಂ.ರಮೇಶ್ ಶಂಕರಘಟ್ಟ, ರಾಘವೇಂದ್ರ ವಿ.ಶೆಟ್ಟಿ, ಹೆಚ್.ಆರ್.ಅಶ್ವಥ ಗೌಡ, ಕೆ.ಆರ್.ನಾಗರಾಜ, ರಾಮ ಸೇರಿದಂತೆ ಹಲವರು ಪಕ್ಷ ಸೇರ್ಪಡೆಯಾದರು.
ಸದಸ್ಯತ್ವ ಚೀಟಿ, ಶಾಲು, ಸಿಹಿ
ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಮಂಜುನಾಥಗೌಡ ಮತ್ತು ಬೆಂಬಲಿಗರಿಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಸದಸ್ಯತ್ವ ಚೀಟಿ ನೀಡಿದರು. ಎಲ್ಲರಿಗೂ ಕಾಂಗ್ರೆಸ್ ಶಾಲು ಹೊದಿಸಿ, ಸಿಹಿ ತಿನ್ನಿಸಿ ಪಕ್ಷಕ್ಕೆ ಸ್ವಾಗತಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]