SHIVAMOGGA LIVE NEWS
ರಾಜ್ಯ ಸರ್ಕಾರದ ಅನುದಾನ ವಿಚಾರ
ಮಧು ಬಂಗಾರಪ್ಪ : ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ಯೋಜನೆಗಳಿಗೆ ನಮ್ಮ ಗಮನಕ್ಕೆ ತಾರದೆ ರಿಬ್ಬನ್ ಕತ್ತರಿಸುತ್ತಿದ್ದಾರೆ. ರಾಜ್ಯದಲ್ಲಿ ಇನ್ನೂ ಬಿಜೆಪಿ ಸರ್ಕಾರವೇ ಇದೆ ಅಂದುಕೊಂಡಿದ್ದಾರೆ. ಸಂಸದರೇ ಸರ್ಕಾರ ಬದಲಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದೆ. ಜಿಲ್ಲಾ ಮಂತ್ರಿಯಾಗಿ ನಾನಿದ್ದೇನೆ ಅನ್ನುವುದನ್ನು ಮರೆಯಬೇಡಿ. ರಿಬ್ಬನ್ ಕತ್ತರಿಸುವುದು ಬಿಜೆಪಿಯವರಿಗೆ ಒಂದು ರೋಗವಾಗಿದೆ.
ಬಿ.ವೈ.ರಾಘವೇಂದ್ರ : ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದಿಂದ ಒಂದೇ ಒಂದು ರೂ. ಕೊಡುಗೆ ಇಲ್ಲ. ಹಿಂದಿನ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ಹಿಂಪಡೆಯಲಾಗುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ 36 ಕೋಟಿ ರೂ. ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಚಂದ್ರಗುತ್ತಿಗೆ ಬಿಡುಗಡೆಯಾಗಿದ್ದ 1 ಕೋಟಿ ರೂ., ಕದಂಬರ ಜಾಗ ಅಭಿವೃದ್ಧಿ, ಶಕ್ತಿ ಮಾತಾಂಗ ದೇವಿ ದೇಗುಲ, ಸಕ್ರೆಬೈಲ್ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 17 ಕೋಟಿ ರೂ. ಹಿಂಪಡೆಯಲಾಗಿದೆ. ಸಣ್ಣ ನೀರಾವರಿ ಅಭಿವೃದ್ಧಿಗೆ ಬಿಡುಗಡೆಯಾಗಿದ್ದ 150 ಕೋಟಿ ರೂ. ತಡೆ ಹಿಡಿದಿದೆ. ಈ ಬಗ್ಗೆ ಸಚಿವರಿಗೆ ಗೊತ್ತಿಲ್ಲವೆ?
ಇನ್ನಷ್ಟು ಓದಲು NEXT ಬಟನ್ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200