SHIVAMOGGA LIVE NEWS
ಅಲ್ಲಮಪ್ರಭು ಕ್ಷೇತ್ರ ಅಭಿವೃದ್ಧಿ
ಮಧು ಬಂಗಾರಪ್ಪ : ಜಿಲ್ಲೆಯಲ್ಲಿ ಕೆಲವರು ವೈಯಕ್ತಿಕವಾಗಿ ಅಭಿವೃದ್ಧಿ ಆಗಿದ್ದಾರೆ. ಆದರೆ ಶಿಕಾರಿಪುರದ ಬಳ್ಳಿಗಾವಿಯಂತಹ ಧಾರ್ಮಿಕ ಕ್ಷೇತ್ರ ಯಾಕೆ ಅಭಿವೃದ್ಧಿಯಾಗಿಲ್ಲ ಅನ್ನುವುದು ಯಕ್ಷ ಪ್ರಶ್ನೆ. ಅಲ್ಲಮಪ್ರಭು ಹೆಸರಿನಲ್ಲಿ ಅಲ್ಲ, ಅಮ್ಮ, ಪ್ರಭು ಎಂದು ಮೂರು ಧರ್ಮಗಳು ಸೇರಿವೆ. ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಸ್ಪಷ್ಟ ರೂಪುರೇಷ ಸಿದ್ಧಪಡಿಸುತ್ತೇವೆ.
ಬಿ.ವೈ.ರಾಘವೇಂದ್ರ : ಬಳ್ಳಿಗಾವಿಯ ಅಲ್ಲಮಪ್ರಭು ಜನ್ಮಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿ ಕಂಡು ನೋವಾಗಿದೆ ಎಂದಿದ್ದಾರೆ. ಸೊರಬ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿ ಅದೇ ರಸ್ತೆಯಲ್ಲಿ ಸಾಗುವಾಗ ಅವರಿಗೆ ನೋವಾಗಿರಲಿಲ್ಲವೆ. ಪುರಾತತ್ವ ಇಲಾಖೆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. 3 ಕೋಟಿ ರೂ. ಅನುದಾನ ಕೊಡಿಸಿದ್ದೇನೆ. ಮೊದಲ ಕಂತಿನ 50 ಲಕ್ಷ ರೂ. ಹಣ ವಿರಕ್ತಮಠಕ್ಕೆ ಜಮೆಯಾಗಿದೆ. ಎರಡನೇ ಕಂತಿನ ಹಣ ಬಿಡುಗಡೆ ವೇಳೆ ಕಾಂಗ್ರೆಸ್ ತಡೆ ಹಾಕಿದೆ. ಬಿಡುಗಡೆಯಾದ ಅನುದಾನ ಹಿಂತಿರುಗಿಸುವಂತೆ ಸೂಚಿಸಿದೆ.
ಇನ್ನಷ್ಟು ಓದಲು NEXT ಬಟನ್ ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200