ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 4 ಸೆಪ್ಟೆಂಬರ್ 2019
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನಕ್ಕು, ಬಿಜೆಪಿಗು ಯಾವುದೆ ಸಂಬಂಧವಿಲ್ಲ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ರಾಜಕೀಯ ಪ್ರೇರಣೆ ಇಲ್ಲ. ಅವರ ವ್ಯಂಗ್ಯಕ್ಕೆ ನಾವು ಪ್ರತಿವ್ಯಂಗ್ಯ ಮಾಡುವುದಿಲ್ಲ. ಜಾರಿ ನಿರ್ದೇಶನಾಲಯ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, ಬಿಜೆಪಿಗು ಅದಕ್ಕೂ ಸಂಬಂಧವಿಲ್ಲ ಎಂದರು.
ಡಿಕೆಶಿಯನ್ನು ಎದುರಿಸುವ ಅನಿವಾರ್ಯತೆ ಇಲ್ಲ
ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಎದುರಿಸುವ ಅನಿವಾರ್ಯತೆ ತಮ್ಮ ಪಕ್ಷಕ್ಕಿಲ್ಲ. ಯಾಕಂದರೆ, ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಪಕ್ಷವನ್ನು ನಾವು ಸೋಲಿಸಿದ್ದೇವೆ. ಕಾಲಕಾಲಕ್ಕೆ ಕಾನೂನು ಯಾವ ಕ್ರಮಗಳನ್ನು ಕೈಗೊಳ್ಳಬೇಕೋ ಅದನ್ನು ಕೈಗಳ್ಳುತ್ತದೆ ಎಂದು ಸಚಿವರು ಪ್ರತಿಕ್ರಿಯೆ ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]