Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

23/06/2025 12:23 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ: ಸ್ವಾತಂತ್ರ್ಯಕ್ಕು ಮೊದಲು ಧರ್ಮದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡಿದರು. ಇಷ್ಟಾದರು ಕಾಂಗ್ರೆಸ್‌ ಪಕ್ಷ ಮುಸ್ಲಿಮರ ತುಷ್ಠೀಕರಣ ನೀತಿ ಬಿಟ್ಟಿಲ್ಲ. ಬಡವರಿಗೆ ಹಂಚುವ ಮನೆಗಳಲ್ಲಿಯು ಶೇ.15ರಷ್ಟು ಮೀಸಲಾತಿ (Reservation) ನೀಡಲಾಗಿದೆ. ಇದು ಅತ್ಯಂತ ಘೋರ ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ಮುಸ್ಲಿಮರಿಗೆ ವಸತಿ ನೀಡಬಾರದು ಎಂದು ನಾವು ಹೇಳುತ್ತಿಲ್ಲ. ಎಲ್ಲಾ ಬಡವರಿಗೆ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ವಸತಿ ಯೋಜನೆಗಳನ್ನು ರೂಪಿಸಲಾಗಿದೆ. ಆದರೆ ಇದರಲ್ಲಿಯು ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ (Reservation) ನಿಗದಿ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ ಈ ಮೊದಲು ಯೋಜನೆಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿತ್ತು. ಈಗ ವಸತಿ ಯೋಜನೆಗಳಲ್ಲಿ ಮೀಸಲು ನಿಗದಿಪಡಿಸಿದೆ. ಕಾಂಗ್ರೆಸ್‌ ಪಕ್ಷ ತುಷ್ಠೀಕರಣ ಬಿಡಬೇಕು. ಡೋಂಗಿ ಜಾತ್ಯತೀತವನ್ನು ಕೈ ಬಿಡಬೇಕು.ಎಸ್‌.ಎನ್.ಚನ್ನಬಸಪ್ಪ, ಶಾಸಕ

‘ಯಡಿಯೂರಪ್ಪ ಹೋರಾಟದಿಂದಲೆ ಸಚಿವರಾಗಿದ್ದೀರಿ’

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಟೀಕಿಸಿದ್ದಾರೆ. ಯಡಿಯೂರಪ್ಪ ಅವರು ಕೂಲಿ ಕಾರ್ಮಿಕರು, ಶ್ರಮಿಕರು, ರೈತ ಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು. ತುರ್ತು ಪರಿಸ್ಥಿತಿ ವಿರುದ್ಧ ಬಿಜೆಪಿ ನಾಯಕರು ಮತ್ತು ಯಡಿಯೂರಪ್ಪ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು‌. ಇದರಿಂದಾಗಿಯೇ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿದೆ. ಅದೇ ಕಾರಣಕ್ಕೆ ಮಧು ಬಂಗಾರಪ್ಪ ಇವತ್ತು ಸಚಿವರಾಗಿದ್ದಾರೆ.

MLA-SN-Channabasappa-Press-Meet-at-Shimoga-BJP-Office

ಯಡಿಯೂರಪ್ಪ ಅವರನ್ನು ಮಟ್ಟ ಹಾಕಲು ಅವರ ವಿರುದ್ಧ ಈಚೆಗೆ ಪ್ರಕರಣ ದಾಖಲು ಮಾಡಲಾಗಿತ್ತು. ನ್ಯಾಯಾಲಯ ಕ್ಲೀನ್ ಚಿಟ್ ನೀಡಿದ ಮೇಲೂ ಆರೋಪ ಮಾಡುವುದು ಸರಿಯಲ್ಲ. ಶಿಕ್ಷಣ ಸಚಿವರು ಸುಳ್ಳು ಹೇಳುವುದನ್ನು ಬಿಡಬೇಕು.ಎಸ್‌.ಎನ್.ಚನ್ನಬಸಪ್ಪ, ಶಾಸಕ

https://chat.whatsapp.com/JPJ0lTQsTKf365Fqu6Q7cd

ಸರ್ಕಾರ ಭ್ರಷ್ಟಾಚಾರದ ಕೂಪ

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ ಎಂಬುದನ್ನು ಅವರ ಶಾಸಕರೆ ಬಹಿರಂಗಪಡಿಸುತ್ತಿದ್ದಾರೆ. ಬಡವರಿಗೆ ಸೂರು ನೀಡುವ ವಸತಿ ನಿಗಮಗಳು ಮತ್ತು ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರ ಕುರಿತು ಶಾಸಕ ಬಿ.ಆರ್.ಪಾಟೀಲ್ ನೋವು ಹಂಚಿಕೊಂಡಿದ್ದಾರೆ. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತನಿಖೆಯ ಯೋಚನೆ ಮಾಡದಿರುವುದು ದುರದೃಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

MLA-SN-Channabasappa-Press-Meet-at-Shimoga-BJP-Office

ವಸತಿ ಸಚಿವ ಜಮೀರ್ ಅಹಮದ್ ಅವರ ಮೂಗಿನ ಅಡಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಅವರಿಗೇ ಗೊತ್ತಿಲ್ಲದಿರುವುದು ಹೇಗೆ. ಮೊದಲು ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಬೇಕು. ಆ ಬಳಿಕ ವಸತಿ ಯೋಜನೆಯಲ್ಲಿನ ಭ್ರಷ್ಟಾಚಾರದ ಕುರಿತು ತನಿಖೆ ನಡೆಯಬೇಕು.ಎಸ್‌.ಎನ್.ಚನ್ನಬಸಪ್ಪ, ಶಾಸಕ

MLA-SN-Channabasappa-Press-Meet-at-Shimoga-BJP-Office

ಅನೇಕ ಇಲಾಖೆಯಲ್ಲಿ ಇದೇ ಮಾದರಿ ಭ್ರಷ್ಟಾಚಾರ ನಡೆಯುತ್ತಿದೆ. ಗುತ್ತಿಗೆದಾರರು ಹೋದರೆ ಯೋಜನೆಗೆ ಅನುಮತಿ ನೀಡಲಾಗುತ್ತದೆ. ಶಾಸಕರು ಹೋದರೆ ಅನುಮತಿ ನಿರಾಕರಿಸಲಾಗುತ್ತಿದೆ. ಇದರ ಬಗ್ಗೆ ಅನೇಕರು ಆರೋಪಿಸಿದ್ದಾರೆ. ಈ ಕುರಿತು ತನಿಖೆಯಾಗಬೇಕು. ಮುಸ್ಲಿಂ ತುಷ್ಠೀಕರಣದ ವಿರುದ್ಧ, ಹಿಂದೂಗಳ ಮೇಲಿನ ದಬ್ಬಾಳಿಕೆ ನಿಲ್ಲಿಸುವಂತೆ ವಿಧಾನಸಭೆ ಅಧಿವೇಶನದ ಒಳಗೆ, ಹೊರಗೆ ಬೃಹತ್ ಹೋರಾಟವನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಕೆ.ಜಗದೀಶ್‌, ನಗರ ಅಧ್ಯಕ್ಷ ಮೋಹನ್‌ ರೆಡ್ಡಿ ಸೇರಿ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.

ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ, ಹೊರ ಇರುವು ಇಳಿಕೆ, ಇವತ್ತು ಎಷ್ಟಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Tunga-Dam-Gajanuru. ಗಾಜನೂರಿನ ತುಂಗಾ ಜಲಾಶಯದ ಒಳ, ಹೊರ ಇರುವು ಇಳಿಕೆ, ಇವತ್ತು ಎಷ್ಟಿದೆ?
Next Article Youth-Congress-protest-against-fertilizers-price-hike ದುಬಾರಿಯಾಯ್ತು ಗೊಬ್ಬರ, ಯುವ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶ, ಸಾಲ ಮನ್ನಾಗೆ ಒತ್ತಾಯ

ಇದನ್ನೂ ಓದಿ

Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
KS-Eshwarappa-Press-meet-in-Shimoga
SHIVAMOGGA CITY

‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-Mahanagara-Palike-ambedkar-statue
SHIVAMOGGA CITY

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Crime-News-General-Image
CRIME DIARYSHIVAMOGGA CITY

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?