Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS

‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS

04/01/2022 1:26 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜನವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರೊಂದಿಗೆ ಸಂವಾದ ಆಯೋಜಿಸಲಾಗಿತ್ತು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸಂವಾದದಲ್ಲಿ ಡಿ.ಎಸ್.ಅರಣ್ ಹೇಳಿದ ಟಾಪ್ 10 ಸಂಗತಿಗಳಿವು

ಸಿಕ್ಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು‌. ನಿಗಮದ ಅಧ್ಯಕ್ಷರ ಸ್ಥಾನ ನೀಡಿದಾಗ ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿದವರಿದ್ದಾರೆ. ಆದರೆ ನಿಗಮದ ಜವಾಬ್ದಾರಿಯನ್ನು ಚನ್ನಾಗಿ ನಿಭಾಯಿಸಿದ ಕಾರಣಕ್ಕೆ ಟಿಕೆಟ್ ಸಿಕ್ಕಿದೆ.

ಯಡಿಯೂರಪ್ಪ ಅವರು ಬಂದಿದ್ದರಿಂದ ಚುನಾವಣಾ ಕಣ ಟೇಕಾಫ್ ಆಯ್ತು. ಐದು ಕ್ಲಸ್ಟರ್ ಮಾಡಿಕೊಂಡು ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿಯಾದೆವು. ಮೊದಲೆರಡು ಭಾರಿ ನನ್ನ ವಿಚಾರಗಳನ್ನು ತಿಳಿಸಿದೆ. ಮೂರನೆ ಭೇಟಿ ವೇಳೆ ಗ್ರಾಮ ಪಂಚಾಯಿತಿ ಸದಸ್ಯರು ನನ್ನ ಜೊತೆಗೆ ಫೋಟೊ ತೆಗೆಸಿಕೊಳ್ಳಲು ಆರಂಭಿಸಿದರು. ಇದು ಗೆಲುವಿನ ವಿಶ್ವಾಸ ಮೂಡಿಸಿತು.

ಚುನಾವಣೆ ಅಂದರೆ ಜಾತಿ ಲೆಕ್ಕಾಚಾರ ಆರಂಭವಾಗುತ್ತದೆ. ಆದರೆ ಈ ಚುನಾವಣೆಯಲ್ಲಿ ನಮ್ಮ ಸಮುದಾಯದ ಮತದಾರರ ಸಂಖ್ಯೆ ಕೇವಲ ಎರಡು. ಆದರೂ ಮತದಾರರು ಜಾತಿಗೆ ಪ್ರಾಧಾನ್ಯ ನೀಡದೆ ಗೆಲವು ನೀಡಿದ್ದಾರೆ.

180 ಮಂದಿ 20 ಮನೆಗೆ ಹೋಗದೆ ಕೆಲಸ ಮಾಡಿದ್ದರು. ನಾನು ಒಂದು ಕಡೆ ಹೋಗಿ ಪ್ರಚಾರ ಮಾಡಿ ಬಂದ ಬಳಿಕ ಪ್ರತಿಕ್ರಿಯೆ ಪಡೆಯುತ್ತಿದ್ದರು. ತಪ್ಪುಗಳೇನು, ತಿದ್ದಿಕೊಳ್ಳಬೇಕಾ ಎಂದು ಪರಿಶೀಲಿಸುತ್ತಿದ್ದರು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಚುನಾವಣೆ ಸಂದರ್ಭ ನಾನು ತುಂಬಾ ತಾಳ್ಮೆಯಿಂದ ಇದ್ದೆ. ಸೋತರೆ ಇದೊಂದು ಪಾಠವಾಗಲಿದೆ. ಗೆದ್ದರೆ ನಿರೀಕ್ಷೆಗಳನ್ನು ಈಡೇರಿಸುವತ್ತ ಗಮನ ಹರಿಸುತ್ತೇನೆ ಅಂದುಕೊಂಡಿದ್ದೆ.

ಸದ್ಯ ಹಲವು ಗ್ರಾಮಗಳಲ್ಲಿ ರಸ್ತೆಗಳು ಚನ್ನಾಗಿ ಆಗಿವೆ. ಪ್ರಮುಖವಾಗಿ ಡಿಜಿಟಲಿಕರಣ ಮಾಡಬೇಕಿದೆ. ಎರಡ್ಮೂರು ಗ್ರಾಮ ಪಂಚಾಯಿತಿಗಳನ್ನು ಪ್ರಾಥಮಿಕವಾಗಿ ಡಿಜಿಟಲಿಕರಣ ಮಾಡುವತ್ತ ಯೋಚಿಸಿದ್ದೇನೆ. ಇದಕ್ಕೆ ಓಎಫ್‌ಸಿ ಕೇಬಲ್ ಅಳವಡಿಕೆ ಮಾಡುವತ್ತ ಚರ್ಚೆ ನಡೆಯುತ್ತಿದೆ. ಅಲ್ಲಿನ ಅವಶ್ಯಕತೆಗೆ ಬೇಕಿರುವುದು ಮಾಡುವತ್ತ ಕೆಲಸ ಮಾಡುತ್ತೇನೆ.

ವಿಧಾನ ಪರಿಷತ್ ಅಂದರೆ ಹಿರಿಯರ ಸದನ ಅಂತಾರೆ. ನಾನು ಅತ್ಯಂತ ಕಿರಿಯನಾಗಲಿಲ್ಲವೆ ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಕಾಕತಾಳಿಯ ಎಂಬಂತೆ ನಮ್ಮ ತಂದೆಯವರು ಕೂಡ ಇದೆ ವಯಸ್ಸಿಗೆ ಹೋಗಿದ್ದರು.

ಹಳ್ಳಿ ಹಳ್ಳಿಗೆ ಪ್ರವಾಸ

365 ಗ್ರಾಮ ಪಂಚಾಯತಿಗಳಿವೆ. ಜ.31 ಅಥವಾ ಫೆ.15ರ ಬಳಿಕ ಒಂದು ಪಂಚಾಯತಿಗೆ ಒಂದು ಗಂಟೆ ಭೇಟಿ ನೀಡುತ್ತೇನೆ. ಪ್ರಶ್ನಾವಳಿ ಸಿದ್ದಪಡಿಸಿಕೊಂಡು ಏನಿಲ್ಲ? ಏನು ಅಗತ್ಯವಿದೆ ಎಂಬುದರ ಕುರಿತು ಮಾಹಿತಿ ಪಡೆಯುತ್ತೇನೆ. ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ದಿನಕ್ಕೆ 12 ಗಂಟೆ ಕ್ಷೇತ್ರಕ್ಕೆ ಕೆಲಸ ಮಾಡುತ್ತೇನೆ ಅಂದಿದ್ದೆ. ಅದನ್ನು ಮಾಡುತ್ತೇನೆ.

AVvXsEiyUwzCQfNcjyPMErXWzlVTQH5K b0YH73YGB2uLxN1g uwEFGNo92TIHf9CkqwG6z LYGxD5dZVB8tnjfAbZhC6nkhI4Uirr VTcONREuyEvSTuLy CXaZtJl1SKMwBzXsT 0RgOshWzsE3FtzFBfNbqnKMuyczR8HXDJkyvhUNpGSt EgW1 oQmXfw=s926

ಜಾಗೃತಿ ಮೂಡಿಸುವ ಕಾರ್ಯವನ್ನು ಕೂಡ ಮಾಡಲಿದ್ದೇವೆ. ಯೋಜನೆಗಳೇನು, ಕೇಂದ್ರ, ರಾಜ್ಯ ಸರ್ಕಾರದ ಅನುದಾನಗಳೇನು ಎಂಬುದರ ಜಾಗೃತಿ ಮೂಡಿಸುತ್ತೇವೆ. ಫೆಬ್ರವರಿ ತಿಂಗಳಲ್ಲೆ ಈ ಕಾರ್ಯ ನಡೆಯಲಿದೆ.

ಗ್ರಾಮ ಪಂಚಾಯಿತಿಗಳಿಗೆ ನಮಗೆ ಅನುದಾನ ಕಡೆಮೆ ಇದೆ. ಸರಿಯಾದ ದಾಖಲೆಗಳನ್ನು ಸಿದ್ಧಪಡಿಸಬೇಕು. ಆ ಕೆಲಸ ಮಾಡಿದರೆ ಸರ್ಕಾರದಿಂದ ಹೆಚ್ಚು ಅನುದಾನ ಲಭಿಸಲಿದೆ. ಇದಕ್ಕಾಗಿ ಕ್ರಮ ವಹಿಸುತ್ತೇನೆ.

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ ನೇರಿಗೆ, ಮಾಧ್ಯಮ ಅಕಾಡೆಮಿ ಸದಸ್ಯ ಗೋಪಾಲ ಯಡಗೆರೆ ಇದ್ದರು.

AVvXsEi3OeZ84L4K7KxRV KAdikws0r4OiK3N286Kac6Qa3rwskv5 Pen3By7 yum1A8tW8wkEsAf0Z7eTF in kDbNpukna42N3f rdqZueIHJ4DJEvTlqAhsYKC wxMk2Bb 6lC ZpG7FWfQs bvKDKFOgY1L0ssvDBzLt2u2uM1NvEzMyhaB35guTjJTgFA=s926

ABOUT ME DECEMBER REPORT

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 040121 Youth Jumped to Tunga River from Bridge ಶಿವಮೊಗ್ಗದ ಹಳೆ ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವಕ
Next Article 040122 KB Prasanna Kumar Press Meet against Eshwarappa ‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?