SHIVAMOGGA LIVE NEWS | 11 JANUARY 2024
SHIMOGA : ಚುನಾವಣೆ ಮೊದಲು ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಈಗ ನಿಬಂಧನೆಗಳನ್ನು ವಿಧಿಸಿದೆ. ಅದರಂತೆ ಯಾರಿಗು ಯೋಜನೆಯ ಲಾಭ ದೊರೆಯುವುದಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ.ಹರಿಕೃಷ್ಣ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರಿಕೃಷ್ಣ, ಎಲ್ಲ ನಿರುದ್ಯೋಗಿಗಳಿಗು ಯುವನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಈಗ ಪದವಿ ಪಡೆದು 6 ತಿಂಗಳು ಕಳೆದಿರಬೇಕು ಎಂಬ ಮಾನದಂಡ ವಿಧಿಸಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಕಳೆದ ಅಕ್ಟೋಬರ್ ತಿಂಗಳಲ್ಲಿ ಫಲಿತಾಂಶ ಪ್ರಕಟಿಸಿದೆ. ಈ ವಿವಿ ವ್ಯಾಪ್ತಿಯ ಯುವಕರು ಯುವನಿಧಿ ಯೋಜನೆ ಲಾಭ ಪಡೆಯಲು ಇನ್ನೂ ಮೂರು ತಿಂಗಳು ಕಾಯಬೇಕಾಗುತ್ತದೆ ಎಂದು ಟೀಕಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಜೈಲ್ ಸರ್ಕಲ್ನಿಂದ ಗೋಪಿ ಸರ್ಕಲ್ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್ಗಳು
ಪ್ರಮುಖರಾದ ಸುಹಾಸ್ ಶಾಸ್ತ್ರಿ, ಗಣೇಶ್, ಸಂಗಯ್ಯ, ರಾಹುಲ್ ಬಿದರೆ ಸುದ್ದಿಗೋಷ್ಠಿಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200