ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ

Published On : ಡಿಸೆಂಬರ್ 24, 2023

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 24 DECEMBER 2023

SHIMOGA : ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಈ ಆದೇಶ ಜಾರಿಗೆ ಬರಲಿದೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಶಿವಮೊಗ್ಗದ ಪದವೀಧರ ಸಹಕಾರ ಸಂಘದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯಾವುದೆ ಶಿಕ್ಷಣ ಸಂಸ್ಥೆಯಲ್ಲು ಮಕ್ಕಳ ಕೈಯಲ್ಲಿ ಶೌಚ ಸ್ವಚ್ಚತೆ ಮಾಡಿಸುವಂತಿಲ್ಲ. ಹಾಗೆ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಇನ್ಮುಂದೆ ಶಾಲಾ ಸ್ವಚ್ಚತೆಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ. ಇನ್ನು, ಎಲ್ಲಾ ಶಾಲೆಯಲ್ಲೂ ಮುಂದಿನ ವರ್ಷದಿಂದ ಮಕ್ಕಳು ನೆಲದ ಮೇಲೆ ಕೂಳಿತು ಪಾಠ ಕೇಳುವಂತಿಲ್ಲ. 1 ರಿಂದ 10ನೇ ತರಗತಿ ವರೆಗೆ ಮಕ್ಕಳು ತರಗತಿಗಳಲ್ಲಿ ಬೆಂಚ್‌ ಮೇಲೆಯೇ ಕುಳಿತು ಪಾಠ ಕೇಳಬೇಕು. ಇದು ನಮ್ಮ ಇಲಾಖೆಯ ಆದೇಶ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರೋಬೋ ರೇಸ್‌, ಹೇಗಿತ್ತು ರೇಸ್‌? ಇಲ್ಲಿದೆ ಫೋಟೊ ಸಹಿತ ವರದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಡಿಸೆಂಬರ್ 24, 2023

Leave a Comment