ಗರ್ಭಗುಡಿಯಲ್ಲಿ ಜಾರಿಬಿತ್ತು ನಾಮಪತ್ರದ ಫೈಲ್, ಹಾರಲೇ ಇಲ್ಲ ಯಡಿಯೂರಪ್ಪಗೆ ಬುಕ್ ಮಾಡಿದ್ದ ಹೆಲಿಕಾಪ್ಟರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 28 ಮಾರ್ಚ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಇದ್ದ ಫೈಲ್, ದೇವಸ್ಥಾನದ ಗರ್ಭಗುಡಿಯಲ್ಲಿ ಜಾರಿಬಿತ್ತು. ಇದರಿಂದ ಕೆಲಕ್ಷಣ ರಾಘವೇಂದ್ರ ಮತ್ತವರ ಕುಟುಂಬ ವಿಚಲಿತರಾದ ಘಟನೆ ನಡೆಯಿತು.

ನಾಮಪತ್ರ ಸಲ್ಲಿಸುವ ಹಿನ್ನೆಲೆ, ಬೆಳಗ್ಗೆಯಿಂದಲೇ ರಾಘವೇಂದ್ರ, ಕುಟುಂಬ ಸಹಿತವಾಗಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದರು. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ರಾಘವೇಂದ್ರ, ದೇವರ ಆಶೀರ್ವಾದ ಬೇಡಿದರು.

ನಂತರ ಶಿವಮೊಗ್ಗದ ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಹಿತ ಭೇಟಿ ನೀಡಿದ್ದರು. ಈ ವೇಳೆ, ನಾಮಪತ್ರದ ಫೈಲನ್ನು ದೇವರ ಮುಂದಿಟ್ಟು ಪೂಜಿಸಲಾಗುತ್ತಿತ್ತು. ಮಂಗಳಾರತಿ ಆರಂಭವಾಗುತ್ತಿದ್ದಂತೆ, ದೇವರ ಮುಂದಿದ್ದ ನಾಮಪತ್ರದ ಫೈಲ್ ಜಾರಿಬಿತ್ತು. ಇದರಿಂದ ಕೆಲಕ್ಷಣ ರಾಘವೇಂದ್ರ ಮತ್ತವರ ಕುಟುಂಬದವರು ವಿಚಲಿತರಾದರು.

ಹಾರಲೇ ಇಲ್ಲ ಯಡಿಯೂರಪ್ಪ ಹೆಲಿಕಾಪ್ಟರ್

ಇನ್ನು, ಪುತ್ರ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭ, ಯಡಿಯೂರಪ್ಪ ಅವರು ಉಪಸ್ಥಿತರಿರಬೇಕಿತ್ತು. ಆದರೆ ಕಡೇ ಕ್ಷಣದಲ್ಲಿ ಯಡಿಯೂರಪ್ಪ ಗೈರಾದರು. ಬೆಂಗಳೂರಿನಲ್ಲಿದ್ದ ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ, ಶಿವಮೊಗ್ಗಕ್ಕೆ ಆಗಮಿಸಬೇಕಿತ್ತು. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಇದೇ ಹೆಲಿಕಾಪ್ಟರ್’ನಲ್ಲಿ ಶಿವಮೊಗ್ಗಕ್ಕೆ ಭೇಟಿ ನಿಡಬೇಕಿತ್ತು. ಯಡಿಯೂರಪ್ಪ ಆಪ್ತ ಸಿದ್ದಲಿಂಗಸ್ವಾಮಿ ಸೇರಿದಂತೆ ಹಲವರು ಅವರಿಗಾಗಿ ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಕಾದಿದ್ದರು.

Yedyurappa Pressmeet1 1 1

ಆದರೆ, ತಾಂತ್ರಿಕ ದೋಷದಿಂದಾಗಿ ಹೆಲಿಕಾಪ್ಟರ್ ಟೇಕಾಫ್ ಆಗಲೇ ಇಲ್ಲ. ಹಾಗಾಗಿ ಯಡಿಯೂರಪ್ಪ ಅವರ ಶಿವಮೊಗ್ಗ ಪ್ರವಾಸ ದಿಢೀರ್ ರದ್ದಾಯಿತು. ವಿಚಾರ ತಿಳಿಯುತ್ತಿದ್ದಂತೆ ಯಡಿಯೂರಪ್ಪ ಬೆಂಬಲಿಗರು ಹೆಲಿಪ್ಯಾಡ್’ನಿಂದ ಹಿಂತಿರುಗಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment