SHIVAMOGGA LIVE NEWS | 9 JANUARY 2024
SHIMOGA : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬದಲು ಇರುವ ಉದ್ಯೋಗಗಳನ್ನು ಕಸಿದುಕೊಂಡಿದೆ. ನಿರುದ್ಯೋಗಿಗಳಿಗೆ ಸಹಾಯ ಮಾಡುವ ಸಲುವಾಗಿ ರಾಜ್ಯ ಸರ್ಕಾರ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಇದರಿಂದ ಲಕ್ಷಾಂತರ ನಿರುದ್ಯೋಗಿಗಳಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಜ.12ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಡಾ. ಶರಣ ಪ್ರಕಾಶ್ ಪಾಟೀಲ್, ಡಾ ಸುಧಾಕರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಯುವಕರು, ಸಾರ್ವಜನಿಕರು ಸೇರಿ ಸುಮಾರು 1 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ, ಮೂರು ದಿನ ಪ್ರವಾಸ, ಎರಡು ದಿನ ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ್, ಪ್ರಮುಖರಾದ ಕಲೀಂ ಪಾಷಾ, ಮಂಜುನಾಥ ಬಾಬು, ಮಧು, ಎನ್.ಟಿ.ಪ್ರವೀಣ್ ಕುಮಾರ್ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200