| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 22 JANUARY 2024
SHIMOGA : ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ ನಡೆಯಲಿದೆ. ಅಧಿಕಾರ ವಿಕೇಂದ್ರಿಕರಣ ಮಾಡದೆ ಇರುವುದೆ ಬಿಜೆಪಿ ಸೋಲಿಗೆ ಕಾರಣ. ಈ ತಪ್ಪನ್ನು ಕಾಂಗ್ರೆಸ್ ಮಾಡಲ್ಲ ಎಂದು ಎಐಸಿಸಿ ಉಸ್ತುವಾರಿ ಮಯೂರ್ ಜೈನ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಯೂರ್ ಜೈನ್, ಲೋಕಸಭೆ ಚುನಾವಣೆ ಕುರಿತು ಪ್ರಮುಖ ಮಾಹಿತಿ ತಿಳಿಸಿದರು.
ಮಯೂರ್ ಜೈನ್ ಹೇಳಿದ 3 ಪ್ರಮುಖಾಂಶ
ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ ನಡೆಯಲಿದೆ. ಸಮಿತಿ ನೇಮಕದಲ್ಲಿ ಎಲ್ಲ ವರ್ಗದವರಿಗೂ ಮೀಸಲು ಇರಲಿದೆ. ಜಿಲ್ಲಾ ಕಾಂಗ್ರೆಸ್ನಿಂದ ಹತ್ತು ದಿನದಲ್ಲಿ ಪಟ್ಟಿ ಬಿಡುಗಡೆಯಾಗಬೇಕು. ಇಲ್ಲದಿದ್ದಲ್ಲಿ ನಾನೇ ಪಟ್ಟಿ ಸಿದ್ದ ಮಾಡುತ್ತೇನೆ. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯ.

ಬಿಜೆಪಿ ನೀಡಿದ ಶೇ.90ರಷ್ಟು ಭರವಸೆಗಳನ್ನು ಈಡೇರಿಸಲಿಲ್ಲ. ಜನ ಬಿಜೆಪಿಯ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಅವರು ಭರವಸೆಯ ಆಡಳಿತ ನೀಡುತ್ತಿದ್ದಾರೆ. ಕಾಂಗ್ರೆಸ್ ನೀಡಿದ ಐದು ಭರವಸೆಗಳನ್ನು ಈಡೇರಿಸಲಾಗಿದೆ. ತಮಿಳುನಾಡಿನ ಸರಕಾರ ತನ್ನ ಗ್ಯಾರಂಟಿ ಈಡೇರಿಸಲು ಎರಡು ವರ್ಷ ಬೇಕಾಯಿತು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಕೆಲವೆ ತಿಂಗಳಲ್ಲಿ ಅವುಗಳನ್ನು ಜಾರಿಗೆ ತಂದಿದೆ.

ಲೋಕಸಭೆ ಚುನಾವಣೆಗೆ ಹೆಚ್ಚಿನ ಸಮಯವಿಲ್ಲ. ಫೆಬ್ರವರಿ ಕೊನೆ ವಾರದಲ್ಲಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈಗ ರಾಹುಲ್ ಗಾಂಧಿ ಭಾರತ್ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗೆ ಇದನ್ನು ಆರಂಭಿಸಿದ್ದಾರೆ. ರಾಹುಲ್ ಕಾಂಗ್ರೆಸ್ಗೆ ಬಹಳಷ್ಟು ದುಡಿದಿದ್ದಾರೆ. ಅವರನ್ನು 2024 ರಲ್ಲಿ ಪ್ರಧಾನ ಮಂತ್ರಿಯಾಗಿ ಮಾಡಬೇಕಿದೆ.
ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಹೆಚ್.ಸಿ. ಯೋಗೀಶ್, ಗೋಣಿ ಮಾಲತೇಶ್, ನಾಗರಾಜ್ ಗೌಡ, ಶ್ರೀನಿವಾಸ್ ಕರಿಯಣ್ಣ, ಅನಿತಾ ಕುಮಾರಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ‘ಬಿಜೆಪಿಯಲ್ಲಿ ಮಾತ್ರ ಅವರಿಗೆ ಗುರುಬಲ, ಕಾಂಗ್ರೆಸ್ನಿಂದ ತಮಗೆ ಟಿಕೆಟ್ ಖಚಿತʼ
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()