Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್‍ಯಾರ ಬಗ್ಗೆ ಏನಿದೆ ಚರ್ಚೆ?

ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್‍ಯಾರ ಬಗ್ಗೆ ಏನಿದೆ ಚರ್ಚೆ?

08/06/2024 1:06 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 8 JUNE 2024

SHIMOGA : ಲೋಕಸಭೆ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಸಂಸದರಾಗಿ ಬಿ.ವೈ.ರಾಘವೇಂದ್ರ ಪುನರಾಯ್ಕೆ ಆಗಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಇದೆ ಮೊದಲು ವಿಧಾನಸೌಧ ಪ್ರವೇಶಿಸುತ್ತಿದ್ದಾರೆ. ಇವೆರಡು ಚುನಾವಣೆಗಳು ಹಲವರ ರಾಜಕೀಯ ಭವಿಷ್ಯ (Future) ಉಜ್ವಲಗೊಳಿಸಿದೆ. ಅದರೆ ಮತ್ತಷ್ಟು ದಿಗ್ಗಜರು, ಕಾರ್ಯಕರ್ತರ ಎದುರು ಮುಂದೇನು ಎಂಬ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದೆ.

ks-eshwarappa.webpಯಾರೆಲ್ಲರ ರಾಜಕೀಯ ಭವಿಷ್ಯವೇನು?

ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಹಾಗಾಗಿ ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಚುನಾವಣೆಯಲ್ಲಿ ಕೇವಲ 30 ಸಾವಿರ ಮತ ಗಳಿಸುವಲ್ಲಿ ಸಾದ್ಯವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಈ‍ಶ್ವರಪ್ಪ ನಡೆ ಬಗ್ಗೆ ಕುತೂಹಲವಿದೆ. ಪಕ್ಷಕ್ಕೆ ಮರಳುತ್ತಾರಾ? ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಮುಂದುವರೆಸುತ್ತ ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಾರಾ? ಅನ್ನುವುದಕ್ಕೆ ಇನ್ನಷ್ಟೆ ಉತ್ತರ ದೊರೆಯಬೇಕಿದೆ. ಇನ್ನೊಂದೆಡೆ ಪುತ್ರ ಕೆ.ಇ.ಕಾಂತೇಶ್‌ ರಾಜಕೀಯ ಅಂತ್ಯವಾಗುತ್ತ ಅಥವಾ ಜಿಲ್ಲಾ ಪಂಚಾಯಿತಿ, ಪಾಲಿಕೆ ಚುನಾವಣೆಗೆ ಅಣಿಯಾಗುತ್ತಾರಾ ಅನ್ನುವುದು ಸದ್ಯದ ಕುತೂಹಲ.

Minister-Madhu-Bangarappa-and-M-Srikanth-Congress-Leaderಮಧು ಬಂಗಾರಪ್ಪ, ಶಿಕ್ಷಣ ಸಚಿವ : ಮೇಲ್ನೋಟಕ್ಕೆ ಲೋಕಸಭೆ ಚುನಾವಣೆ ಎದುರಿಸಿದ್ದು ಗೀತಾ ಶಿವರಾಜ್‌ ಕುಮಾರ್‌. ವಾಸ್ತವದಲ್ಲಿ ಈ ಬಾರಿಯೂ ಚುನಾವಣೆ ನಡೆದಿದ್ದು ಮಧು ಬಂಗಾರಪ್ಪ ಮತ್ತು ಬಿ.ವೈ.ರಾಘವೇಂದ್ರ ಮಧ್ಯದಲ್ಲೆ. ಗೀತಾ ಶಿವರಾಜ್‌ ಕುಮಾರ್‌ ಅವರ ಸೋಲು ಮಧು ಬಂಗಾರಪ್ಪ ಅವರ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ಹುಟ್ಟಿಸಿದೆ. ಜಿಲ್ಲಾ ಕಾಂಗ್ರೆಸ್‌ನೊಳಗೆ ಮಧು ಬಂಗಾರಪ್ಪ ವಿರುದ್ಧ ಅಸಮಾಧಾನಿತರು ಒಬ್ಬಿಬ್ಬರಲ್ಲ. ಲೋಕಸಭೆ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರದ ಫಲಿತಾಂಶಗಳನ್ನು ಮುಂದಿಟ್ಟುಕೊಂಡು ವಿರೋಧಿ ಬಣ ಮಧು ಬಂಗಾರಪ್ಪ ಸಚಿವ ಸ್ಥಾನಕ್ಕೆ ಕುತ್ತು ತರಬಹುದು ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಸಿಎಂ ಮಾನಸ ಪುತ್ರ, ಬೆಂಗಳೂರು ಗ್ರಾಮಾಂತರದಲ್ಲಿ ಡಿಸಿಎಂ ಸಹೋದರ ಸೋತಿದ್ದಾರೆ. ಹಾಗಾಗಿ ಸೋಲಿನ ಕಾರಣಕ್ಕೆ ಮಧು ಬಂಗಾರಪ್ಪ ಸಚಿವ ಸ್ಥಾನ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬ ಚರ್ಚೆಯು ಇದೆ.

ayanuru%20manjunathಆಯನೂರು ಮಂಜುನಾಥ್‌, ಮಾಜಿ ಸಂಸದ : ಸಂಸತ್ತು, ವಿಧಾನ ಮಂಡಲದ ನಾಲ್ಕೂ ಸದನ ಕಂಡ ಅನುಭವಿ ರಾಜಕಾರಣಿ. ಕಳೆದ ವರ್ಷ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿತ್ತು. ಕಾಂಗ್ರೆಸ್‌ ಪಕ್ಷ ಸೇರಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ವರ್ಷದಲ್ಲಿ ಎರಡು ಸೋಲು, ಮೂರು ಪಕ್ಷ ಬದಲಾವಣೆ ಮಾಡಿದ್ದಾರೆ. ಹಾಗಾಗಿ ಆಯನೂರು ಮಂಜುನಾಥ್‌ ರಾಜಕೀಯ ಭವಿಷ್ಯವೇನು ಎಂಬ ಕುತೂಹಲವಿದೆ. ಕಾಂಗ್ರೆಸ್‌ನಲ್ಲೆ ಉಳಿಯುತ್ತಾರೋ? ಉಳಿದರೆ ಸ್ಥಾನಮಾನವೇನು? ಎಂಬ ಚರ್ಚೆಗಳು ಆರಂಭವಾಗಿವೆ.

sp%20dineshಎಸ್‌.ಪಿ.ದಿನೇಶ್‌, ಪಕ್ಷೇತರ ಅಭ್ಯರ್ಥಿ : ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕೆ ದುಡಿದಿದ್ದರು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಹೆಸರಿದೆ. ನೈಋತ್ಯ ಪದವೀಧರರ ಕ್ಷೇತ್ರದ ಟಿಕೆಟ್‌ ದೊರೆಯದಿದ್ದಕ್ಕೆ ಅಸಮಾಧನಗೊಂಡು ಬಂಡಾಯವಾಗಿ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ದಿನೇಶ್‌ ಅವರು ಕಾಂಗ್ರೆಸ್‌ಗೆ ಮರಳುತ್ತಾರೋ? ಸಹಕಾರ ಕ್ಷೇತದಲ್ಲಿ ಮಾತ್ರ ತೊಡಗಿಸಿಕೊಳ್ಳುತ್ತಾರೊ? ಅನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ.

ಮಾಜಿ ಕಾರ್ಪೊರೇಟರ್‌ಗಳು, ಪ್ರಮುಖರು : ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಅಣಿಯಾದಾಗ ಬಿಜೆಪಿಯ ಹಲವರು ಬಹಿರಂಗವಾಗಿ, ಮತ್ತೂ ಕೆಲವರು ಗೌಪ್ಯವಾಗಿ ಬೆಂಬಲ ಸೂಚಿಸಿದ್ದರು. ಬಹಿರಂಗವಾಗಿ ಈಶ್ವರಪ್ಪ ಬೆನ್ನಿಗೆ ನಿಂತವರ ರಾಜಕೀಯ ಭವಿಷ್ಯದ ಕುರಿತು ಕುತೂಹಲವಿದೆ. ರಾಷ್ಟ್ರಭಕ್ತರ ಬಳಗ ಶಿವಮೊಗ್ಗ ಪಾಲಿಕೆ ಚುನಾವಣೆ ಮೇಲೆ ಕಣ್ಣಿಟಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಅವರಿಗೆಲ್ಲ ಅವಕಾಶವಾಗುವ ಸಾಧ್ಯತೆಯೂ ಇದೆ. ಇನ್ನೊಂದೆಡೆ ಬಿಜೆಪಿಯೊಳಗೇ ಇದ್ದುಕೊಂಡು ಗೌಪ್ಯವಾಗಿ ಈ‍ಶ್ವರಪ್ಪ ಪರ ಕೆಲಸ ಮಾಡಿದವರು, ತಟಸ್ಥವಾಗಿ ಉಳಿದವರಿಗೆ ಈಗ ಭವಿಷ್ಯದ ಚಿಂತೆ ಎದುರಾಗಿದೆ. ವಿಧಾನ ಪರಿಷತ್‌ ಚುನಾವಣೆ ಸಂದರ್ಭ ಕಾಂಗ್ರೆಸ್‌ನಲ್ಲು ಇದೇ ಸ್ಥಿತಿ ಉಂಟಾಗಿತ್ತು. ಅಂತಹವರಿಗು ಈಗ ರಾಜಕೀಯ ಭವಿಷ್ಯದ ಚಿಂತೆಯಾಗಿದೆ.

ತಾಲೂಕು ಮಟ್ಟದ ನಾಯಕರು : ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿಯು ಹಲವರು ಲೋಕಸಭೆ, ವಿಧಾನ ಪರಿಷತ್‌ ಚುನಾವಣೆಗಳ ಸಂದರ್ಭ ಆಚೀಚೆ ಕೆಲಸ ಮಾಡಿದ ಆರೋಪಗಳಿವೆ. ಪಕ್ಷದೊಳಗೆ ಇರುವ ವಿರೋಧಿಗಳು ಇದನ್ನು ಜಿಲ್ಲಾ ಮಟ್ಟಕ್ಕೆ, ಹೈಕಮಾಂಡ್‌ ಹಂತಕ್ಕೆ ತಲುಪಿಸಲು ವರದಿ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಟಿಕೆಟ್‌ ನಿರೀಕ್ಷೆಯಲ್ಲಿರುವ ಹಲವರಿಗು ಈಗ ರಾಜಕೀಯ ಭವಿಷ್ಯದ ಯೋಚನೆ ಆರಂಭವಾಗಿದೆ.

ಹಲವರ ರಾಜಕೀಯಕ್ಕೆ ಮರುಜೀವ

ಹಲವರ ರಾಜಕೀಯ ಭವಿಷ್ಯ ಅಸ್ಥಿರವಾಗಿದ್ದರೆ ಮತ್ತಷ್ಟು ರಾಜಕಾರಣಿಗಳಿಗೆ ಇವೆರಡು ಚುನಾವಣೆ ರಾಜಕೀಯ ಮರುಹುಟ್ಟು ನೀಡಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಾಗರ, ಸೊರಬ, ಶಿವಮೊಗ್ಗ ಗ್ರಾಮಾಂತರದಲ್ಲಿ ಸೋಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಬಿಜೆಪಿಗೆ ಲೀಡ್‌ ಸಿಕ್ಕಿದೆ. ಇದರಿಂದ ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್‌ ಬಂಗಾರಪ್ಪ, ಅಶೋಕ್‌ ನಾಯ್ಕ್‌ ಅವರ ಹೆಸರು ಪಕ್ಷದ ವೇದಿಕೆಗಳಲ್ಲಿ ಪುನಃ ಮುನ್ನಲೆಗೆ ಬಂದಿದೆ. ಭದ್ರಾವತಿಯಲ್ಲಿ ಜೆಡಿಎಸ್‌ನ ಶಾರದಾ ಅಪ್ಪಾಜಿಗೌಡ ಅವರಿಗು ಶಕ್ತಿ ಬಂದಂತಾಗಿದೆ. ಮುಂದೆ ಮೈತ್ರಿ ಮುಂದುವರೆದರೆ ಶಾರದಾ ಅಪ್ಪಾಜಿಗೌಡ ಅವರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಡಾ. ಧನಂಜಯ ಸರ್ಜಿಗೆ ಅದ್ಧೂರಿ ಸ್ವಾಗತ, ತೆರೆದ ವಾಹನದಲ್ಲಿ ಮೆರವಣಿಗೆ

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article SMS-Fraud-Shimoga-CEN-Police-Station. ಈ ಮೇಲ್‌ ಚೆಕ್‌ ಮಾಡಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್‌
Next Article Shimoga-Mahanagara-Palike-ambedkar-statue ಶಿವಮೊಗ್ಗಕ್ಕೆ ನೂತನ ಕಮಿಷನರ್‌ ನೇಮಿಸಿದ ಸರ್ಕಾರ

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?