ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020
ಪ್ರತಿ ವಾರ್ಡ್, ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಇವತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞಾ ದಿನ ನಡೆಯಿತು. ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲ ಕಡೆಯಲ್ಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ನಡೆಯಿತು.

ಶಿವಮೊಗ್ಗದ ಮಹಾನಗರ ಪಾಲಿಕೆಯ ವಾರ್ಡುಗಳು, ಎಲ್ಲಾ ತಾಲೂಕಿನ ನಗರಾಡಳಿತ ವ್ಯಾಪ್ತಿಯ ವಾರ್ಡುಗಳು, ಗ್ರಾಮ ಪಂಚಾಯಿತಿ ಹಂತದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮ ನಡೆಯಿತು. ಒಂದು ಟಿವಿಯಲ್ಲಿ ಪ್ರತಿಜ್ಞಾ ದಿನದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆಯಾಗಿತ್ತು. ಮತ್ತೊಂದು ಟಿವಿಯಲ್ಲಿ ಸ್ಥಳೀಯ ನೇರ ಪ್ರಸಾರವನ್ನು ಗಮನಿಸಲು ಅವಕಾಶ ಕಲ್ಪಿಸಲಾಗಿತ್ತು.
ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್
ಶಿವಮೊಗ್ಗ ನಗರದಲ್ಲಿ ಪ್ರತಿಜ್ಞಾ ದಿನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪೆಂಡಾಲ್ ಹಾಕಿಸಿ, ಪ್ರತಿಜ್ಞಾ ದಿನದ ಕಾರ್ಯಕ್ರಮದ ನೇರ ವೀಕ್ಷನೆ ಮಾಡಿದರು.

ಕೈ ಕೊಟ್ಟ ಕರೆಂಟ್, ಆಕ್ರೋಶ
ಮತ್ತೊಂದೆಡ ಕೆಲವು ಕಡೆ ವಿದ್ಯುತ್ ಕೈಕೊಟ್ಟಿದೆ. ಇದರಿಂದ ನೇರ ಪ್ರಸಾರ ವೀಕ್ಷಿಸಲು ಸಾದ್ಯವಾಗದೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ತೀರ್ಥಹಳ್ಳಿಯ ಕುಡುಮಲ್ಲಿಗೆ, ಮಂಡಗದ್ದೆ, ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿ ಕೆಲವು ಕಡೆ ವಿದ್ಯುತ್ ವ್ಯತ್ಯಯವಾಗಿದೆ.

ಇದರ ಹಿಂದೆ ಕಿಡಿಗೇಡಿಗಳ ಕೈವಾಡ ಇದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ವ್ಯತ್ಯಯವಾದರೂ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200