SHIVAMOGGA LIVE NEWS | 16 APRIL 2023
SHIMOGA : ಟಿಕೆಟ್ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ ಹಾಕಿದರು. ಕಾಂಗ್ರೆಸ್ ಕಚೇರಿ ಮುಂದೆ ಟೈರ್ಗೆ ಬೆಂಕಿ ಹಚ್ಚಿ ಹೈಕಮಾಂಡ್ ವಿರುದ್ಧ ಘೋಷಣೆ (Protest) ಕೂಗಿದರು. ಈ ವೇಳೆ ಸುಂದರೇಶ್ ಅವರು ಭಾವುಕರಾದರು.
ಹೆಚ್.ಎಸ್.ಸುಂದರೇಶ್ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇವತ್ತು ಸುಂದರೇಶ್ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಅವರ ಕಾರಿಗೆ ಮುತ್ತಿಗೆ (Protest) ಹಾಕಿದರು.
ʼಇಷ್ಟೆಲ್ಲ ಕೆಲಸ ಮಾಡಿದರೂ..ʼ
ʼಇಷ್ಟೆಲ್ಲ ಕೆಲಸ ಮಾಡಿದರೂ ನಿಮಗೆ ಟಿಕೆಟ್ ಕೈ ತಪ್ಪಿದೆ. ಸುತ್ತು ಹೋಗಿದ್ದ ಪಕ್ಷಕ್ಕೆ ಜೀವ ತುಂಬಿದ್ದೆ ನೀವು. ಈಗ ನೀವು ಕಾಂಗ್ರೆಸ್ ಕಚೇರಿಗೆ ಬರುವುದು ಬೇಡ. ವಾರ್ಡ್ಗಳಲ್ಲಿ ನಾವೂ ಕೆಲಸ ಮಾಡುದಿಲ್ಲʼ ಎಂದು ಬೆಂಬಲಿಗರು ಸಿಟ್ಟಾದರು. ಈ ವೇಳೆ ಸುಂದರೇಶ್ ಅವರು ಬೆಂಬಲಿಗರನ್ನು ಸಮಾಧಾನಪಡಿಸಲು ಮುಂದಾದರು. ಇದ್ಯಾವುದಕ್ಕೂ ಬೆಂಬಲಿಗರು ತಣ್ಣಗಾಗದಿದ್ದರಿಂದ ಸುಂದರೇಶ್ ಅವರು ಭಾವುಕರಾದರು.
ಟೈರ್ಗೆ ಬೆಂಕಿ ಹಚ್ಚಿದರು
ಇದೇ ವೇಳೆ ಆಕ್ರೋಶಗೊಂಡ ಸುಂದರೇಶ್ ಅವರ ಬೆಂಬಲಿಗರು ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ನಾಯಕರ ವಿರುದ್ಧ ಘೋಷಣೆ ಕೂಗಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಡಿದೆದ್ದ ಬೆಂಬಲಿಗರು, ಮಾಜಿ ಶಾಸಕರ ಮನೆ ಬಳಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200