ಆರದ ಆಕ್ರೋಶ, ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸಿಟ್ಟು ಹೊರ ಹಾಕಿದ ಕಾರ್ಯಕರ್ತರು

SHIVAMOGGA LIVE NEWS | 17 APRIL 2023

SHIMOGA : ಕಾಂಗ್ರೆಸ್‌ ಕಚೇರಿ ಮುಂದೆ ಇವತ್ತೂ ಪ್ರತಿಭಟನೆ (Protest) ನಡೆಯಿತು. ಟೈರ್‌ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆಗಳನ್ನು ಕೂಗಿ ತಮ್ಮ ಸಿಟ್ಟು ಹೊರ ಹಾಕಿದರು.

Protest-by-Sundresh-followers-in-Shimoga.

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಅವರು ಟಿಕಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕಟ್‌ ಕೈ ತಪ್ಪಿದ್ದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಕಚೇರಿ ಮುಂದೆ ಹಠಾತ್‌ ಜಮಾವಣೆಯಾದ ಬೆಂಬಲಿಗರು ಪ್ರತಿಭಟನೆ (Protest) ನಡೆಸಿದರು.

ಟೈರ್‌ಗೆ ಬೆಂಕಿ ಹಚ್ಚಿದರು

ಪ್ರತಿಭಟನೆ ವೇಳೆ ಮಾತನಾಡಿದ‌ ದಕ್ಷಿಣ ಬ್ಲಾಕ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಹಮತ್, ʼಸುಂದರೇಶ್‌ ಅವರಿಗೆ ಟಿಕೆಟ್‌ ಸಿಗುವ ಆಶಾಭಾವನೆ ಇತ್ತು. ಸಾಲು ಸಾಲು ಹೋರಾಟಗಳನ್ನು ಮಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಅವರಿಗೆ ಟಿಕೆಟ್‌ ಕೊಡದಿರುವುದು ಬೇಸರ ಮೂಡಿಸಿದೆ. ಕೆಪಿಸಿಸಿ ಮತ್ತು ಎಐಸಿಸಿ ಘಟಕ ಈ ಕೂಡಲೆ ಅಭ್ಯರ್ಥಿ ಬದಲಾವಣೆ ಮಾಡಬೇಕುʼ ಎಂದು ಆಗ್ರಹಿಸಿದರು.

Kalleshwara-Enterprises.webp

ಇದನ್ನೂ ಓದಿ – ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈ‍ಶ್ವರಪ್ಪ, ಏನಿದೆ ಅದರಲ್ಲಿ?

ಇದೆ ವೇಳೆ ಕಾಂಗ್ರೆಸ್‌ ಕಚೇರಿ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿದ ಸುಂದರೇಶ್‌ ಬೆಂಬಲಿಗರು ಘೋಷಣೆ ಕೂಗಿದರು.

shivamogga live news whatsappa number

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment