SHIVAMOGGA LIVE NEWS | 12 APRIL 2023
SHIMOGA : ಈಶ್ವರಪ್ಪ ನಿವೃತ್ತಿ ನಿರ್ಧಾರದ ಹಿನ್ನೆಲೆ ಅವರ ಬೆಂಬಲಿಗರ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ (Protest) ನಡೆಸಿ, ಟೈರ್ಗೆ ಬೆಂಕಿ ಹಚ್ಚಲು ಯತ್ನಿಸಿ ಸಿಟ್ಟು ಹೊರಹಾಕಿದ್ದಾರೆ. ಪಕ್ಷ ನೀಡಿದ್ದ ಜವಾಬ್ದಾರಿಗೆ ರಾಜೀನಾಮೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿ ಬಳಿ ಈಶ್ವರಪ್ಪ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಈಶ್ವರಪ್ಪ ಅವರು ನಿವೃತ್ತಿ ನಿರ್ಧಾರ ಕೈಬಿಡಬೇಕು. ಪಕ್ಷದ ಹೈಕಮಾಂಡ್ ಈಶ್ವರಪ್ಪ ಅವರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಅವರ ಬದಲಿಗೆ ಕೆ.ಈ.ಕಾಂತೇಶ್ ಅವರಿಗಾದರೂ ಟಿಕೆಟ್ ಘೋಷಿಸಬೇಕು ಎಂದು ಪಟ್ಟು ಹಿಡಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಮುಂದುವರೆದ ಸಸ್ಪೆನ್ಸ್, ಜನರಲ್ಲಿ ಹೆಚ್ಚಿದ ಕುತೂಹಲ, ರಾಜಕೀಯ ಲೆಕ್ಕಾಚಾರ ಚುರುಕು
ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿ ಈಶ್ವರಪ್ಪ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು. ಬಳಿಕ ಕಚೇರಿ ಮುಂದಿನ ರಸ್ತೆಯಲ್ಲಿ ವಾಹನಗಳನ್ನು ತಡೆದು ರಸ್ತೆ ತಡೆ ನಡೆಸಿದರು. ಇದರಿಂದ ಆ ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಕೆಲವು ಕಾರ್ಯಕರ್ತರು ಬಿಜೆಪಿ ಕಚೇರಿ ಮುಂಭಾಗ ಟೈರ್ಗೆ ಬೆಂಕಿ ಹಚ್ಚಲು ಯತ್ನಿಸಿದರು. ಆದರೆ ಹಿರಿಯ ಕಾರ್ಯಕರ್ತರು ಯುವಕರನ್ನು ತಡೆದು, ಪಕ್ಷದ ಕಚೇರಿ ಮುಂದೆ ಬೆಂಕಿ ಹಚ್ಚುವುದು ಸರಿಯಲ್ಲ ಎಂದು ಸಮಾಧಾನಪಡಿಸಿದರು.
ಮೋರ್ಚಾಗಳಿಗೆ ರಾಜೀನಾಮೆ
ಇನ್ನು, ಶಿವಮೊಗ್ಗ ಬಿಜೆಪಿಯ ವಿವಿಧ ಜವಾಬ್ದಾರಿಗಳಿಗೆ ಈಶ್ವರಪ್ಪ ಅವರ ಅಭಿಮಾನಿಗಳು ರಾಜೀನಾಮೆ ನೀಡಿದರು. ರಾಜೀನಾಮೆ ಪತ್ರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದ ಅಭಿಮಾನಿಗಳನ್ನು ಹಿರಿಯ ಮುಖಂಡರು ಸಭೆ ನಡೆಸಿ ಸಮಾಧಾನಪಡಿಸಲು ಯತ್ನಿಸಿದರು. ಆದರೆ ಇದ್ಯಾವುದಕ್ಕೂ ಒಪ್ಪದ ಈಶ್ವರಪ್ಪ ಅವರ ಬೆಂಬಲಿಗರು ರಾಜೀನಾಮೆ ಪತ್ರ ನೀಡಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200