SHIVAMOGGA LIVE NEWS | 28 MARCH 2024
ELECTION NEWS : ಲೋಕಸಭೆ ಚುನಾವಣೆಗೆ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪ್ರಚಾರ ಬಿರುಸುಗೊಳಿಸಿದ್ದಾರೆ. ಬುಧವಾರ ವಿವಿಧೆಡೆ ಪ್ರಚಾರ, ಕಾರ್ಯಕರ್ತರ ಸಭೆ ನಡೆಸಿದರು.
ಎಲ್ಲೆಲ್ಲಿ ಪ್ರಚಾರ, ಸಭೆಗಳು ನಡೆದವು?
ಶಿವಮೊಗ್ಗದಲ್ಲಿ ಕಾರ್ಯಕರ್ತರ ಸಭೆ
ಶಿವಮೊಗ್ಗ : ಬಿಜೆಪಿ ಶಿವಮೊಗ್ಗ ನಗರ ಮಂಡಲದ ವತಿಯಿಂದ ವಾರ್ಡ್ 5ರ ಗುರುಪುರ ಮತ್ತು ಪುರಲೆ ಭಾಗದ ಪಕ್ಷದ ಪ್ರಮುಖರ ಮನೆಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಮೋದಿ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಸಂಸದ ರಾಘವೇಂದ್ರ ತಿಳಿಸಿದರು. ಈ ಸಂದರ್ಭ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಬಿಜೆಪಿ ಮಹಾ ಶಕ್ತಿಕೆಂದ್ರದ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಸ್ವಾಮೀಜಿ ಭೇಟಿ, ಚರ್ಚೆ
ಶಿವಮೊಗ್ಗ : ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ನಡೆಸಿ, ಆಶೀರ್ವಾದ ಪಡೆದರು.
ಮುಖಂಡರು, ಕಾರ್ಯಕರ್ತರ ಜತೆ ಚರ್ಚೆ
ಶಿವಮೊಗ್ಗ : ಇತ್ತ ಶಿವಮೊಗ್ಗದ ನಿವಾಸದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ತಮ್ಮ ಬೆಂಬಲಿಗರನ್ನು ಭೇಟಿಯಾಗಿದ್ದರು. ಚುನಾವಣೆ ಕುರಿತು ಪ್ರಮುಖ ಚರ್ಚೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರಗೆ ಮೈತುಂಬ ಬಣ್ಣ ಬಳಿದ ಯುವಕರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200