Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ವಿಮಾನ ನಿಲ್ದಾಣದಲ್ಲಿ ಅಭ್ಯರ್ಥಿಗಳ ಜೊತೆ ಮಹತ್ವದ ಮೀಟಿಂಗ್‌

ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ವಿಮಾನ ನಿಲ್ದಾಣದಲ್ಲಿ ಅಭ್ಯರ್ಥಿಗಳ ಜೊತೆ ಮಹತ್ವದ ಮೀಟಿಂಗ್‌

27/04/2023 6:19 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 27 APRIL 2023

SHIMOGA : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶೇಷ ವಿಮಾನದ (Special Flight) ಮೂಲಕ ಇವತ್ತು ಶಿವಮೊಗ್ಗಕ್ಕೆ ಆಗಮಿಸಿದ್ದರು. ಜಿಲ್ಲಾ ಕಾಂಗ್ರೆಸ್‌ ಮುಖಂಡರು, ಅಭ್ಯರ್ಥಿಗಳನ್ನು ಭೇಟಿಯಾಗಿ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ಪಡೆದರು. ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Rahul-Gandhi-visits-Shimoga-in-Special-flight

ಎರಡು ವಿಶೇಷ ವಿಮಾನ

ರಾಹುಲ್‌ ಗಾಂಧಿ ಅವರು ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ (Special Flight) ಶಿವಮೊಗ್ಗಕ್ಕೆ ಆಗಮಿಸಿದರು. ರಾಹುಲ್‌ ಗಾಂಧಿ ಮತ್ತು ಅವರ ಭದ್ರತಾ ಸಿಬ್ಬಂದಿ, ಕಚೇರಿ ಸಿಬ್ಬಂದಿ ಪ್ರತ್ಯೇಕ ವಿಮಾನಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಸ್ವಾಗತ, ಚರ್ಚೆ, ಸಲಹೆ

ರಾಹುಲ್‌ ಗಾಂಧಿ ಅವರ ಭೇಟಿಗೆ ಶಿವಮೊಗ್ಗ ಕಾಂಗ್ರೆಸ್‌ನಿಂದ 135 ಮುಖಂಡರಿಗೆ ಅವಕಾಶವಿತ್ತು. ಕೊನೆಗೆ 30 ಮಂದಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾದರು. ಕಾಂಗ್ರೆಸ್‌ನ ಎಲ್ಲಾ ವಿಭಾಗದ ಪ್ರಮುಖರನ್ನು ಭೇಟಿಯಾದ ರಾಹುಲ್‌ ಗಾಂಧಿ ಅವರು, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಬೇಕು ಎಂದು ಸಲಹೆ ನೀಡಿದರು.

ಅಭ್ಯರ್ಥಿಗಳ ಜೊತೆಗೆ ಪ್ರತ್ಯೇಕ ಸಭೆ

ಇನ್ನು, ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಜೊತೆಗೆ ರಾಹುಲ್‌ ಗಾಂಧಿ ಅವರು ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಶಿವಮೊಗ್ಗ ಕ್ಷೇತ್ರದ ಹೆಚ್‌.ಸಿ.ಯೋಗೇಶ್‌, ತೀರ್ಥಹಳ್ಳಿಯ ಕಿಮ್ಮನೆ ರತ್ನಾಕರ್‌, ಭದ್ರಾವತಿಯ ಬಿ.ಕೆ.ಸಂಗಮೇಶ್ವರ್, ಸಾಗರದ ಬೇಳೂರು ಗೋಪಾಲಕೃಷ್ಣ, ಶಿಕಾರಿಪುರದ ಮಾಲ್ತೇಶ್‌, ಶಿವಮೊಗ್ಗ ಗ್ರಾಮಾಂತರದ ಡಾ.ಶ್ರೀನಿವಾಸ ಕರಿಯಣ್ಣ ಅವರ ಜೊತೆಗೆ ಚರ್ಚೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌, ತೀರ್ಥಹಳ್ಳಿಯ ಕಾಂಗ್ರೆಸ್‌ ನಾಯಕ ಮಂಜುನಾಥ ಗೌಡ ಸೇರಿದಂತೆ ಕೆಲವು ಪ್ರಮುಖರು ಇದ್ದರು.

Congress IT Cell Sougandhika and Youth congress President HP Girish Meets rahul gandhi at shimoga airport

ಸೊರಬ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಉಡುಪಿ ಉಸ್ತುವಾರಿ ಆಗಿರುವುದರಿಂದ ರಾಹುಲ್‌ ಗಾಂಧಿ ಭೇಟಿ ವೇಳೆ ಅವರು ಇರಲಿಲ್ಲ.

ಇದನ್ನೂ ಓದಿ – ಶಿವಮೊಗ್ಗದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ

ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಪ್ರಿಯಾಂಕಾ ಗಾಂಧಿ ಅವರು ಶಿವಮೊಗ್ಗಕ್ಕೆ ಬರಲಿಲ್ಲ. ಮುಖಂಡರ ಜೊತೆ ಸಭೆ ಬಳಿಕ ರಾಹುಲ್‌ ಗಾಂಧಿ ಅವರು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಿದರು.

shivamogga live news whatsappa number

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article MP-BY-raghavendra-about-Shimoga-Airport-Flight ಶಿವಮೊಗ್ಗ – ಬೆಂಗಳೂರು ವಿಮಾನ, ಸಂಸದ ರಾಘವೇಂದ್ರ ಹೇಳಿದ್ದೇನು? ಯಾವಾಗ ಶುರುವಾಗುತ್ತೆ ಹಾರಾಟ?
Next Article Areca Price in Shimoga APMC ಅಡಕೆ ಧಾರಣೆ | 27 ಏಪ್ರಿಲ್‌ 2023 | ಶಿವಮೊಗ್ಗ ಸೇರಿ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಕೆ ರೇಟ್?

ಇದನ್ನೂ ಓದಿ

government-employees-state-level-sports-at-nehru-stadium
SHIVAMOGGA CITY

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ, ಗೆಲ್ಲುವ ಛಲದೊಂದಿಗೆ ಅಖಾಡಕ್ಕಿಳಿದ ಸರ್ಕಾರಿ ನೌಕರರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
stop-sand-mining-at-kudli-in-shimoga
SHIVAMOGGA CITY

ಕೂಡ್ಲಿಯಲ್ಲಿ ಮರಳು ಗಣಿಗಾರಿಕೆಗೆ ಟೆಂಡರ್‌, ತಕ್ಷಣ ಕೈ ಬಿಡುವಂತೆ ಪಟ್ಟು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
HIVAMOGGA-NEWS- map
SHIVAMOGGA CITY

ಐಟಿಐ ಪಾಸ್‌ ಆದವರಿಗೆ ಹೆಚ್‌ಎಎಲ್‌ನಲ್ಲಿ ಅಪ್ರೆಂಟಿಸ್‌ ತರಬೇತಿ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?