| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 1 MAY 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್ ಹೇಳಿಕೆಗೆ ಕುಮಾರ್ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ.
ಮಧು ಬಂಗಾರಪ್ಪ ರೀಚಾರ್ಜ್ ಹೇಳಿಕೆ
ಫ್ರೀಡಂ ಪಾರ್ಕ್ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. ಅವರು ಯಾಕೆ ಸೋತರು. ಇಷ್ಟು ದಿನ ಎಲ್ಲಿದ್ದರು. ಸಾಮಾನ್ಯವಾಗಿ ಮೊಬೈಲ್ ರೀಚಾರ್ಜ್ ಮಾಡಿಸುತ್ತೇವೆ. ಅದಕ್ಕೆ ಹಣ ಪಡೆಯುತ್ತಾರೋ, ಉಚಿತವಾಗಿ ಮಾಡುತ್ತಾರೋ. ಕೆಲವು ಗಿರಾಕಿಗಳು ಹಾಗೆ ಎಂದು ಕುಮಾರ್ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿಕೆಶಿ, ಮಧುಗೆ ಮಾತ್ರ ಅನ್ವಯ
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ವೇಳೆ ರೀಚಾರ್ಜ್ ವಿಚಾರ ಕುರಿತು ಪ್ರಶ್ನಿಸಿದಾಗ, ಚಾರ್ಜು, ರೀಚಾರ್ಜ್ ವಿಚಾರಗಳು ಡಿ.ಕೆ.ಶಿವಕುಮಾರ್ ಮತ್ತು ಮಧುಗೆ ಮಾತ್ರ ಅನ್ವಯವಾಗುತ್ತವೆ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲ ಇತ್ತು. ಅವುಗಳನ್ನು ಬಗೆಹರಿಸಿಕೊಂಡು ಬಂದಿದ್ದೇನೆ ಎಂದರು.
ತಂದೆಗೆ ಹೆಗಲು ಕೊಡಲಾಗಲಿಲ್ಲ
ಸಾಗರ ತಾಲೂಕ ಆವಿನಹಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ ಬಂಗಾರಪ್ಪ, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ಇಲ್ಲ. ಕುಮಾರ ಬಂಗಾರಪ್ಪ ಅವರಲ್ಲಿ ‘ಬಂಗಾರಪ್ಪ’ ಎನ್ನುವ ಹೆಸರು ಕಿತ್ತು ಬದಿಗಿಟ್ಟರೆ, ಅವರದು ನಾಯಿ ಪಾಡಾಗಲಿದೆ. ಬಂಗಾರಪ್ಪ ಅವರು ನಿಧನರಾದಾಗ ಸ್ವಂತ ತಂದೆಯ ಪಾರ್ಥೀವ ಶರೀರ ಹೊರುವ ಸೌಭಾಗ್ಯ ಕೂಡ ಅವರಿಗೆ ಸಿಗಲಿಲ್ಲ. ನಾನು ಬಂಗಾರಪ್ಪ ಅವರ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟಿದ್ದೇನೆ. ಇದು ನನ್ನ ಸೌಭಾಗ್ಯ ಎಂದರು.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()