SHIVAMOGGA LIVE NEWS | 11 APRIL 2023
SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ರಸ್ತೆ ತಡೆ (Road Block) ಮಾಡಿದರು. ಹೊಳೆ ಬಸ್ ನಿಲ್ದಾಣದಲ್ಲಿ ರಸ್ತೆ ತಡೆ ಮಾಡಿದ ಅಭಿಮಾನಿಗಳು, ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ ಅಭಿಮಾನಿಗಳು, ಬಳಿಕ ಬಿ.ಹೆಚ್.ರಸ್ತೆಗೆ ಬಂದು ಆಕ್ರೋಶ ಹೊರ ಹಾಕಿದರು. ಟೈರ್ಗೆ ಬೆಂಕಿ ಹಚ್ಚಿ ಸಿಟ್ಟು ತೋರಿಸಿದರು.
ಇದನ್ನೂ ಓದಿ – ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ
ಈಶ್ವರಪ್ಪ ಅವರು ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯಬೇಕು. ಹೈಕಮಾಂಡ್ ಈಶ್ವರಪ್ಪ ಅವರು ಅಥವಾ ಕಾಂತೇಶ್ ಅವರಿಗೆ ಟಿಕೆಟ್ ಘೋಷಿಸಬೇಕು ಎಂದು ಒತ್ತಾಯಿಸಿದರು. ದಿಢೀರ್ ಪ್ರತಿಭಟನೆಯಿಂದಾಗಿ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200