ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022
ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸುಳ್ಳು ಭಾಷಣಗಳು ಈಗ ಜನರಿಗೆ ಅರ್ಥವಾಗುತ್ತಿವೆ. ಜನರೇ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಆಗ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಜವಾಬ್ದಾರಿಗಳನ್ನು ನೀಡಲಾಗುವುದು ಎಂದರು.
ಇತಿಹಾಸ ತಿರುಚುವ ಯತ್ನ
ಮನುವಾದಿಗಳಿಂದ ಆರಂಭದಿಂದಲೂ ಇತಿಹಾಸವನ್ನು ತಿರುಚುವ ಯತ್ನಗಳು ನಡೆಯುತ್ತಿವೆ. ಈಗ ಬಿಜೆಪಿ ಕೂಡ ಅದನ್ನೇ ಮುಂದುವರಿಸಿದೆ. ಗಾಂಧೀಜಿ, ನೆಹರೂ ಅವರ ಬಗ್ಗೆ ತಪ್ಪು ವಿಚಾರಗಳನ್ನು ಹಬ್ಬಿಸಲಾಗುತ್ತಿದೆ. ಮನುಸ್ಮೃತಿಯನ್ನು ಹೇರುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಶ್ರಮ ಪ್ರಮುಖ ಪಾತ್ರ
ಎಂಎಲ್ಎ, ಎಂಎಲ್ಸಿ, ಎಂಪಿ ಹೀಗೆ ಯಾವುದೇ ಚುನಾವಣೆಯಲ್ಲಿ ಗೆಲ್ಲಬೇಕಾದರೂ ಕಾರ್ಯಕರ್ತರ ಶ್ರಮ ಪ್ರಮುಖ ಪಾತ್ರ ವಹಿಸುತ್ತದೆ. ಒಂದುವೇಳೆ, ಅವರನ್ನು ನಿರ್ಲಕ್ಷಿಸಿದರೆ ಮಾಜಿಯಾಗಬೇಕಾಗುತ್ತದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಮಾತ್ರ ಸಂಘಟನೆಗೆ ಆದ್ಯತೆ ನೀಡದೇ ಈ ಕೆಲಸವನ್ನು ನಿರಂತರವಾಗಿ ಮಾಡಬೇಕು. ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ಆದ್ಯತೆ ನೀಡಬೇಕು ಎಂದರು.
ಕಾರ್ಯಕರ್ತರು, ಮುಖಂಡರು ಮತ್ತು ಚುನಾಯಿತ ಪ್ರತಿನಿಧಿಗಳಲ್ಲಿ ಶಿಸ್ತು ಬರದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಪಕ್ಷದ ಕಾರ್ಯಕರ್ತರಿಗೆ ಘಟಪ್ರಭದಲ್ಲಿ ನಿರ್ಮಿಸಿರುವ ಕ್ಯಾಂಪಸ್’ನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳನ್ನು ಪ್ರಚೋದಿಸುವ ಕೆಲಸ
ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಮಾತನಾಡಿ, ಹಿಜಾಬ್- ಕೇಸರಿ ಶಾಲು ಹೆಸರಿನಲ್ಲಿ ಮಕ್ಕಳನ್ನು ಪ್ರಚೋದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದು ಖಂಡನೀಯ ಎಂದರು. ಬಿಜೆಪಿಗೆ ಅಧಿಕಾರ, ಹಣದ ವ್ಯಾಮೋಹ ಬಿಟ್ಟರೇ ಬೇರೆನೂ ಇಲ್ಲ. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಹುಡುಕಿದರೂ ಸಿಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಸಿ.ಯೋಗೇಶ್, ಎಚ್.ಪಿ.ಗಿರೀಶ್, ಶ್ರೀನಿವಾಸ್, ಚಂದ್ರಭೂಪಾಲ್, ಅನಿತಾ ಕುಮಾರ್, ಪಲ್ಲವಿ, ಇಮ್ತಿಯಾಜ್ ಇತರರಿದ್ದರು.
ALSO READ | About Shivamogga Live
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















