SHIVAMOGGA LIVE NEWS
ಶಿವಮೊಗ್ಗ | ಜನರ ಅಪೇಕ್ಷೆಯಂತೆ ಶಿವಮೊಗ್ಗ ಶಾಂತವಾಗಿದೆ (SHIMOGA PEACEFULL). ರಾಷ್ಟ್ರದ್ರೋಹದ ಚಟುವಟಿಕೆ ನಡೆಸುವವರಿಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದೇವೆ. ಅವರೆಲ್ಲ ಈಗ ಬಾಲ ಮುದುಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಾಷ್ಟ್ರದ್ರೋಹದ ಚಟುವಟಿಕೆ ಮಾಡುವವರನ್ನು ಎಲ್ಲಿ ಇಡಬೇಕೋ ಅಲ್ಲಿ ಇಟ್ಟಿದ್ದೇವೆ. ಅವರೆಲ್ಲ ಈಗ ಜೈಲಿನಲ್ಲಿದ್ದಾರೆ. ಮತ್ತೆ ತಲೆಹರಟೆ ಮಾಡಿದರೆ ಎಲ್ಲಿಡಬೇಕೋ ಅಲ್ಲಿಡುತ್ತೇವೆ ಎಂದರು.
ಸುಳ್ಳಾಗಲಿ ಎಂದು ಪ್ರರ್ಥಿಸುತ್ತೇನೆ
ಮುರುಘಾ ಶ್ರೀ ಪೋಸ್ಕೋ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಮಠದ ಸ್ವಾಮೀಜಿಗಳು ನನಗೆ ದೇವರ ಸಮಾನ. ಮುರುಘಾ ಶ್ರೀಗಳ ಬಗ್ಗೆಯು ಗೌರವ ಇದೆ. ತನಿಖೆಯಲ್ಲಿ ಅದು ಸತ್ಯವೋ ಸುಳ್ಳೋ ಎಂಬುದು ಹೊರಬರಲಿ. ಈಗಲೆ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ಸಾಧು ಸಂತರೆ ಹಿಂದೂ ಧರ್ಮಕ್ಕೆ ಪ್ರೇರಣೆಯಾಗಿದ್ದಾರೆ. ಮುರುಘಾ ಶ್ರೀಗಳ ಮೇಲಿನ ಆರೋಪ ಸುಳ್ಳಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ರಾಜಕೀಯ ಚರ್ಚೆ ಇರಲಿಲ್ಲ
ನರೇಂದ್ರ ಮೋದಿ ಅವರು ಮಂಗಳೂರು ಭೇಟಿ ವೇಳೆ ಭಾಷಣದಲ್ಲಿರಾಜಕೀಯ ಚರ್ಚೆ ಮಾಡಲಿಲ್ಲ. 3800 ಕೋಟಿ ರೂ. ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾತನಾಡಿದರು. ಕೋರ್ ಕಮಿಟಿ ಸಭೆಯಲ್ಲಿಯು ರಾಜಕೀಯದ ಬಗ್ಗೆ ಚರ್ಚೆ ಮಾಡಲಿಲ್ಲ. ಇಂತಹ ರಾಷ್ಟ್ರಭಕ್ತನನ್ನು ಪಡೆದಿದ್ದು ನಮ್ಮ ಪುಣ್ಯ. ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಹೋಗಿರುವುದು ನಮಗೆ ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.
75 ಕೋಟಿ ರೂ. ಖರ್ಚು ಮಾಡಿ ಸಿದ್ದರಾಮೋತ್ಸವಕ್ಕೆ ರಾಜ್ಯದ ವಿವಿಧೆಡೆಯಿಂದ ಜನರನ್ನು ಕರೆದುಕೊಂಡು ಬಂದರು. ಆದರೆ ಬಿಜೆಪಿ ಮಂಗಳೂರಿನಲ್ಲಿ ಕಾರ್ಯಕರ್ತರ ಶಕ್ತಿಯಿಂದ ಜನರು ತಾವಾಗಿಯೆ ಬಂದರು. ಬರಿ ಮಂಗಳೂರಿಲ್ಲಿ ಅಷ್ಟು ದೊಡ್ಡ ಪ್ರಮಾಣದಲ್ಲಿ ಜನ ಸೇರಿದ್ದರು.
ಇದನ್ನೂ ಓದಿ – ಮುರುಘಾ ಶ್ರೀ ಪೋಕ್ಸೋ ಕೇಸ್, ಎರಡನೇ ಆರೋಪಿ ರಶ್ಮಿ ಶಿವಮೊಗ್ಗ ಜೈಲಿಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200