SHIVAMOGGA LIVE NEWS | 18 APRIL 2023
SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ.
ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ?
ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್.ರವಿಕುಮಾರ್ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಶ್ರೀನಿವಾಸ ಕರಿಯಣ್ಣ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.
ಇನ್ನು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಸ್.ಕೃಷ್ಣ ಎಂಬುವವರು ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.
ಕಣದಲ್ಲಿ ಯಾರೆಲ್ಲ ಇದ್ದಾರೆ?
ಬಿಜೆಪಿಯ ಕೆ.ಬಿ.ಅಶೋಕ್ ನಾಯ್ಕ್, ಜೆಡಿಎಸ್ ಪಕ್ಷದ ಶಾರದಾ ಪೂರ್ಯಾನಾಯ್ಕ್, ಕಾಂಗ್ರೆಸ್ ಪಕ್ಷದ ಡಾ.ಶ್ರೀನಿವಾಸ ಕರಿಯಣ್ಣ, ಎಎಪಿಯ ಎಸ್.ಎಸ್.ಮಂಜುನಾಥ, ಬಿಎಸ್ಪಿಯ ಎ.ಡಿ.ಶಿವಪ್ಪ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೆ.ಬಿ.ವಿಜಯಾ, ಕರ್ನಾಟಕ ರಾಷ್ಟ್ರ ಸಮಿತಿಯ ನಿರಂಜನ.ಈ, ಸ್ವತಂತ್ರ ಅಭ್ಯರ್ಥಿಗಳಾದ ರಂಗಸ್ವಾಮಿ.ಎಲ್, ತಿಪ್ಪೆರುದ್ರಸ್ವಾಮಿ.ಟಿ, ಭೀಮಪ್ಪ.ಬಿ.ಹೆಚ್, ಪ್ರವೀಣ್ ನಾಯ್ಕ್ ಅವರು ಕಣದಲ್ಲಿದ್ದಾರೆ.
ಇದನ್ನೂ ಓದಿ – ಸಿಗಂದೂರಿಗೆ ತೆರಳುತ್ತಿದ್ದ ಬಸ್ ಪಲ್ಟಿ, ಮಹಿಳೆ ಸಾವು, ಗಾಯಾಳುಗಳು ಆಸ್ಪತ್ರೆಗೆ ಶಿಫ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200