ಲೋಕಸಭೆ ಚುನಾವಣೆಗೆ ಗೀತಾ, ಶಿವಮೊಗ್ಗದಲ್ಲಿ ನಟ ಶಿವರಾಜ್‌ ಕುಮಾರ್‌ ಹೇಳಿದ್ದೇನು? ಇಲ್ಲಿದೆ 3 ಪ್ರಮುಖ ಪಾಯಿಂಟ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 3 MARCH 2024

SHIMOGA : ಲೋಕಸಭೆ ಚುನಾವಣೆಗೆ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸುವ ಕುರಿತು ನಟ ಶಿವರಾಜ್‌ ಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಮಧು ಬಂಗಾರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ಸಂಗತಿಗಳ ಕುರಿತು ಮಾತನಾಡಿದರು.

3 ಪ್ರಮುಖ ಪಾಯಿಂಟ್

POINT-1ಪತ್ನಿ ಗೀತಾ ಶಾಸಕಿ, ಸಂಸದೆಯಾಗಿ ಆಯ್ಕೆಯಾಗಬೇಕು ಎಂಬ ಆಸೆ ಎಲ್ಲರಂತೆ ಪತಿಯಾಗಿ ನನಗೂ ಇದೆ. ಗೀತಾ ಶಿವರಾಜ್‌ಕುಮಾರ್ ಈಗಾಗಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಶಾಸಕಿ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಫೂರ್ತಿ ದೊರೆಯಲಿದೆ. ಇದಕ್ಕಾಗಿಯೇ ಅವರು ಜನಪ್ರತಿನಿಧಿ ಆಗಬೇಕು ಎಂಬ ಆಸೆ ಇದೆ.

POINT-2ಗೀತಾ ಶಿವರಾಜ್‌ಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ. ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ. ಆಕೆ ರಾಜಕೀಯ ಕುಟುಂಬದಿಂದ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ. 

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್‌ ಕೇಕ್‌ನ ಸೀಕ್ರೆಟ್‌’ ಬಹಿರಂಗಪಡಿಸಿದ ನಟ ಶಿವರಾಜ್‌ ಕುಮಾರ್‌

POINT-3ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಇಲ್ಲವಾದರೆ ಬೇಸರವಿಲ್ಲ. ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ಬರುತ್ತೇನೆ. ಸಿನಿಮಾ ಚಿತ್ರೀಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ. ನಾನು ಸಿನಿಮಾರಂಗದಲ್ಲಿ ಇರುವುದರಿಂದ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಹೊಂದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment