SHIVAMOGGA LIVE NEWS | SHIMOGA FM | 22 ಏಪ್ರಿಲ್ 2022
ರಾಜ್ಯದಲ್ಲಿ ಮೊದಲು ಶ್ರೀರಾಮ ಸೇನೆ, ಬಜರಂಗದಳ, ಹಿಂದೂ ಮಹಾಸಭಾ, ಆರ್.ಎಸ್.ಎಸ್’ನವರನ್ನು ಬುಲ್ಡೋಜರ್ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಪ್ರದೇಶ ಮಾದರಿ ಬುಲ್ಡೋಜರ್ ರಸ್ತೆಗಿಳಿಸಬೇಕು ಎಂಬ ಚರ್ಚೆ ಶುರುವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಶ್ರೀರಾಮ ಸೇನೆ, ಬಜರಂಗದಳ, ಹಿಂದೂ ಮಹಾಸಭಾ, ಆರ್.ಎಸ್.ಎಸ್ ಮೇಲೆ ಬುಲ್ಡೋಜರ್ ಮಾಡಬೇಕು. ಆಗ ಸಮಾಜ ಸರಿ ಹೋಗಲಿದೆ ಎಂದು ತಿಳಿಸಿದರು.
ಅಶಾಂತಿ ಹುಟ್ಟಿಸಿದ್ದು ಯಾರು?
ರಾಜ್ಯದಲ್ಲಿ ಹಲಾಲ್, ಹಿಜಾಬ್, ಅಜಾನ್ ಸೇರಿದಂತೆ ಹಲವು ವಿವಾದಗಳನ್ನು ಹುಟ್ಟು ಹಾಕಿ, ಅಶಾಂತಿ ಸೃಷ್ಟಸಲಾಗುತ್ತಿದೆ. ಧಾರ್ಮಿಕ ವಿಚಾರವನ್ನು ಕೆರಳಿಸಿ ಭ್ರಾತೃತ್ವ ಹಾಳು ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.
ವಿವಾದ ಸೃಷ್ಟಿಸಿದವರು ಯಾರೆ ಆಗಿದ್ದರೂ ಕ್ರಮ ಕೈಗೊಳ್ಳಬೇಕು. ಎಸ್.ಡಿ.ಪಿ.ಐ, ಸಿಎಫ್ಐ, ಬಜರಂಗದಳ, ಶ್ರೀರಾಮ ಸೇನೆ, ಬಿಜೆಪಿ, ಆರ್.ಎಸ್.ಎಸ್. ಸೇರಿದಂತೆ ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯ ಅವರು ಸವಾಲು ಹಾಕಿದರು.
ಇದನ್ನೂ ಒದಿ | ಆಸ್ತಿ, ಅಂತಸ್ತು ಪಡೆದುಕೊಂಡು ವಯಸ್ಸಾದ ಅಪ್ಪ, ಅಮ್ಮನ ನೋಡಿಕೊಳ್ಳದಿದ್ದರೆ ಕಠಿಣ ಕ್ರಮದ ಎಚ್ಚರಿಕೆ