ಶಿವಮೊಗ್ಗದಲ್ಲಿ ಮತ್ತೊಂದು ಬಂಡಾಯ, ಪಕ್ಷೇತರರಾಗಿ ಕಣಕ್ಕಿಳಿದ ದಿನೇಶ್‌, ಕಾಂಗ್ರೆಸ್‌ಗೆ ತಲೆನೋವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MAY 2024

POLITICAL NEWS : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಲೆಬಿಸಿ ಉಂಟು ಮಾಡಿದ್ದ ಬಂಡಾಯ, ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಾಧಿಸಲಿದೆ. ಟಿಕೆಟ್‌ ವಂಚಿತರಾಗಿರುವ ಎಸ್‌.ಪಿ.ದಿನೇಶ್‌, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಬಸವ ಜಯಂತಿಯಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಹಂಚಿಕೊಂಡು ಅಧಿಕೃತವಾಗಿ ಕಹಳೆ ಮೊಳಗಿಸಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ಎರಡು ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಸ್‌.ಪಿ.ದಿನೇಶ್‌ ಮತ್ತೊಮ್ಮೆ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಇದೆ ಕಾರಣಕ್ಕೆ ಪದವೀಧರರ ನೋಂದಣಿ ಕಾರ್ಯದಲ್ಲಿ ತೊಡಗಿದ್ದರು. ಆದರೆ ಕೊನೆ ಘಳಿಗೆಯಲ್ಲಿ ಕಾಂಗ್ರೆಸ್‌ ಪಕ್ಷ ಆಯನೂರು ಮಂಜುನಾಥ್‌ ಅವರಿಗೆ ಟಿಕೆಟ್‌ ಘೋಷಿಸಿದೆ. ಹಾಗಾಗಿ ಎಸ್.ಪಿ.ದಿನೇಶ್‌ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಸಿದ್ಧತೆ ಆರಂಭಿಸಿದ ದಿನೇಶ್‌

ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿ ಎಸ್‌.ಪಿ.ದಿನೇಶ್‌ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರ ನೋಂದಣಿ ಮಾಡಿಸಿದ್ದರು. ಪತ್ರಗಳನ್ನು ಕಳುಹಿಸಿ, ಸಾಮಾಜಿಕ ಜಾಲತಾಣದ ಮೂಲಕ ಮತದಾರರಿಗೆ ತಮ್ಮ ಪರಿಚಯ ಮಾಡಿಕೊಂಡಿದ್ದರು.

[su_quote cite=”ಎಸ್‌.ಪಿ.ದಿನೇಶ್‌, ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ”]ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಟಿಕೆಟ್‌ ಭರವಸೆ ನೀಡಿದ್ದರು. ಪ್ರಚಾರದಲ್ಲಿ ತೊಡಗುವಂತೆ ತಿಳಿಸಿದ್ದರು. ಆದರೆ ಟಿಕೆಟ್‌ ಕೈ ತಪ್ಪಿದೆ. ತಾವು ಸ್ಪರ್ಧಿಸಬೇಕು ಅನ್ನುವುದು ಕೆಪಿಸಿಸಿ ಅಧ್ಯಕ್ಷರ ಆಶಾಯ. ಅಂತೆಯೆ ಸ್ಪರ್ಧೆ ಮಾಡುತ್ತಿದ್ದೇನೆ.[/su_quote]

ಕೂದಲೆಳೆ ಅಂತರದಲ್ಲಿ ಸೋತಿದ್ದರು

ನೈಋತ್ಯ ಪದವೀಧರ ಕ್ಷೇತ್ರ ಬಿಜೆಪಿ ಭದ್ರಕೋಟೆ. 2012ರಲ್ಲಿ ಎಸ್‌.ಪಿ.ದಿನೇಶ್‌ ಮೊದಲ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿಯ ಡಿ.ಹೆಚ್‌.ಶಂಕರಮೂರ್ತಿ ಅವರ ವಿರುದ್ಧ ಕೇವಲ 918 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. 2018ರಲ್ಲಿ ವಿಧಾನಸಭೆ ಚುನಾವಣೆ ಮುಗಿದು 21 ದಿನಕ್ಕೆ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ನಡೆದಿತ್ತು. ಈ ಕ್ಷೇತ್ರ ವ್ಯಾಪ್ತಿಯಲ್ಲಿ 27 ಬಿಜೆಪಿ ಶಾಸಕರು ಗೆದ್ದಿದ್ದರು. ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶ ಪರಿಣಾಮ ಬೀರಿತ್ತು. ಹಾಗಾಗಿ ಬಿಜೆಪಿಯ ಆಯನೂರು ಮಂಜುನಾಥ್‌ ವಿರುದ್ಧ ಎಸ್‌.ಪಿ.ದಿನೇಶ್‌ 6 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು.

ದಿನೇಶ್‌ ನಡೆ, ಕೈ ಮುಖಂಡರಿಗೆ ತಲೆಬೇನೆ

ಟಿಕೆಟ್‌ ಕೈತಪ್ಪಿದ್ದರಿಂದ ಎಸ್‌.ಪಿ.ದಿನೇಶ್‌ ಮುನಿಸಿಕೊಂಡಿದ್ದರು. ಲೋಕಸಭೆ ಚುನಾವಣೆ ಪ್ರಚಾರದಿಂದಲು ದೂರ ಉಳಿದಿದ್ದರು. ಈ ಮಧ್ಯೆ ದಿನೇಶ್‌ ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವು ಸಿಗುತ್ತಿದ್ದಂತೆ, ಕಾಂಗ್ರೆಸ್‌ ಮುಖಂಡರು ಸಮಾಧಾನಪಡಿಸುವ ಪ್ರಯತ್ನ ಮಾಡಿದರು. ಆದರೆ ದಿನೇಶ್‌ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದು ಪೋಸ್ಟರ್‌ಗಳು ಹಂಚಿಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷದಲ್ಲಿ ಆಯನೂರು ಮಂಜುನಾಥ್‌ ವಿರೋಧಿ ಬಣ ಸಕ್ರಿಯವಾಗಿರುವುದು ಗೌಪ್ಯವೇನಲ್ಲ. ಆ ಬಣ ಎಸ್‌.ಪಿ.ದಿನೇಶ್‌ ಅವರ ಬೆನ್ನಿಗೆ ನಿಲ್ಲುವ ಸಾಧ್ಯತೆ ಹೆಚ್ಚು. ಇದು ಕಾಂಗ್ರೆಸ್‌ ಮುಖಂಡರಿಗೆ ತಲೆಬಿಸಿ ಹೆಚ್ಚಿಸಿದೆ.

ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಅಧಿಸುಚನೆ ಪ್ರಕಟಿಸಲಾಗಿದೆ. ಮೇ 16ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ. ಜೂ.3ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ – ನಿಮ್‌ ಗಾಡಿ ಮೇಲೆ ಕೇಸ್‌ ಇದ್ಯಾ? ಚೆಕ್‌ ಮಾಡೋದು ಈಗ ಸುಲಭ, ಪೊಲೀಸ್‌ ಇಲಾಖೆಯಿಂದ ಹೊಸ ವೆಬ್‌ಸೈಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 11, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment