ಶಿವಮೊಗ್ಗ ಲೋಕಸಭೆ ಚುನಾವಣೆ ಸಮೀಕ್ಷೆ, ಗೆಲ್ಲೋದ್ಯಾರು? ಎಲ್ಲೆಲ್ಲಿ ಎಷ್ಟು ಮತ ಬರಲಿದೆ? BJP, JDS, ಕಾಂಗ್ರೆಸ್ ಸರ್ವೇಯಲ್ಲೇನಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 9 ಮೇ 2019

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನುವ ಹಾಗೆ, ಚುನಾವಣೆ ಮುಗಿದರೂ, ಸೋಲು ಗೆಲುವಿನ ಲೆಕ್ಕಾಚಾರ ನಿಂತಿಲ್ಲ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿಯವರೆಗೂ ಮತಗಣಿತ ನಡೆಯುತ್ತಲೇ ಇರುತ್ತದೆ.

ಲೋಕಸಭೆ ಚುನಾವಣೆ ಬಳಿಕ ಮೂರು ಪ್ರಮುಖ ಪಕ್ಷಗಳು ಸಮೀಕ್ಷೆ ನಡೆಸಿವೆ. ಬೂತ್ ಮಟ್ಟದಿಂದ ಲೆಕ್ಕಾಚಾರ ನಡೆದಿದ್ದು, ಅಂತಿಮ ವರದಿಯನ್ನು ಸಿದ್ಧಪಡಿಸಿಕೊಂಡಿವೆ. ಇದರ ಆಧಾರದ ಮೇಲೆಯೇ ಅಭ್ಯರ್ಥಿಗಳು ಮತ್ತು ಪಕ್ಷದ ಮುಖಂಡರು ಗೆಲುವು ತಮ್ಮದೇ ಎಂದು ಹೇಳಿಕೆ ನೀಡುತ್ತಿದ್ದಾರೆ.

ಯಾರಿಗೆ ಸೇರುತ್ತೆ ಎರಡು ಲಕ್ಷ ಮತ?

ಶಿವಮೊಗ್ಗ ಲೋಕಸಭೆಗೆ 2018ರಲ್ಲಿ ಉಪ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 5,43,306 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ 4,91,158 ಮತ ಗಳಿಸಿದ್ದರು. ಗೆಲುವಿನ ಅಂತರ 52,148 ಮತಗಳಾಗಿದ್ದವು.

ಉಪ ಚುನಾವಣೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ 77,388, ಜೆಡಿಎಸ್ 51,815 ಮತ ಪಡೆದಿದ್ದವು. ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ 67,899, ಬಿಜೆಪಿ 75,181, ಭದ್ರಾವತಿ ಕ್ಷೇತ್ರದಲ್ಲಿ ಜೆಡಿಎಸ್ 62,415, ಬಿಜೆಪಿ 51,469, ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ 58,105, ಬಿಜೆಪಿ 65,319, ಶಿಕಾರಿಪುರ ಕ್ಷೇತ್ರದಲ್ಲಿ ಜೆಡಿಎಸ್ 58,787, ಬಿಜೆಪಿ 77,570, ಸೊರಬ ತಾಲ್ಲೂಕು ಜೆಡಿಎಸ್ 68,605, ಬಿಜೆಪಿ 67,108, ಸಾಗರ ತಾಲ್ಲೂಕು ಜೆಡಿಎಸ್ 68,993, ಬಿಜೆಪಿ 60,526, ಬೈಂದೂರು ಜೆಡಿಎಸ್ 54,522, ಬಿಜೆಪಿ 68,992 ಮತ ಪಡೆದಿದ್ದವು.

Raghavendra BYR MP File Shot 1 1

ಉಪ ಚುನಾವಣೆ ಫಲಿತಾಂಶ ಗಮನಿಸಿದಾಗ, ಬಿಜೆಪಿ ಪಕ್ಷ ಭದ್ರಾವತಿ, ಸೊರಬ, ಸಾಗರದಲ್ಲಿ ಹಿನ್ನಡೆ ಅನುಭವಿಸಿದ್ದು ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿತ್ತು. ಉಪ ಚುನಾವಣೆಗೆ ಹೋಲಿಸಿದರೆ, ಈ ಬಾರಿ 2 ಲಕ್ಷ ಹೆಚ್ಚುವರಿ ಮತದಾನವಾಗಿದೆ. ಈ ಮತಗಳು ಯಾರ ಪಾಲಾಗಿವೆ ಎಂಬುದು ಸದ್ಯದ ಕುತೂಹಲ.

ಬೂತ್ ವಾರು ಪ್ರಚಾರ, ಸಮೀಕ್ಷೆ

ಜಿಲ್ಲೆಯಲ್ಲಿ ಬಿಜೆಪಿ, ಬೂತ್ ಮಟ್ಟದಿಂದಲೂ ಸಶಕ್ತವಾಗಿದೆ. ಇದುವೆ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ, ಬಿಜೆಪಿ ಗೆಲುವಿಗೆ ಕಾರಣ. ಈ ಬಾರಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಕೂಡ, ಬಿಜೆಪಿಯ ತಂತ್ರವನ್ನೇ ಅನುಸರಿಸಿ, ಬೂತ್ ಮಟ್ಟದಿಂದ ಪ್ರಚಾರ ನಡೆಸಿದವು. ಇನ್ನು, ಚುನಾವಣೆ ಮುಗಿಯುತ್ತಿದ್ದಂತೆ, ಬೂತ್ ಮಟ್ಟದಿಂದಲೇ ಮಾಹಿತಿ ತರಿಸಿಕೊಂಡು, ಸಮೀಕ್ಷೆ ನಡೆಸಲಾಗಿದೆ.

ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರತ್ಯೇಕವಾಗಿ ಆಂತರಿಕ ಸಮೀಕ್ಷೆ ನಡೆಸಿವೆ. ಒಂದೊಂದು ಸಮೀಕ್ಷೆಯೂ ಒಂದೊಂದು ರಿಪೋರ್ಟ್ ನೀಡಿವೆ. ಇದರ ಆಧಾರದ ಮೇಲೆಯೇ, ಆಯಾ ಪಕ್ಷದ ಮುಖಂಡರು, ತಮ್ಮ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.

ಯಾವ್ಯಾವ ಪಕ್ಷದ ಸಮೀಕ್ಷೆಯಲ್ಲಿ ಏನೇನಿದೆ?

ಮಧು ಬಂಗಾರಪ್ಪಗೆ, ಶಿವಮೊಗ್ಗ ನಗರದಲ್ಲಿ ಬಿಜೆಪಿಗಿಂತಲೂ – 5 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 8 ಸಾವಿರ, ಭದ್ರಾವತಿಯಲ್ಲಿ + 25 ಸಾವಿರ, ತೀರ್ಥಹಳ್ಳಿಯಲ್ಲಿ +12 ಸಾವಿರ, ಸೊರಬ +18 ಸಾವಿರ, ಶಿಕಾರಿಪುರದಲ್ಲಿ + 5 ಸಾವಿರ, ಸಾಗರದಲ್ಲಿ + 20 ಸಾವಿರ, ಬೈಂದೂರಿನಲ್ಲಿ + 5 ಸಾವಿರ ಮತಗಳು ಮಧು ಬಂಗಾರಪ್ಪ ಪರವಾಗಿ ಬರಲಿದೆ ಎಂದು ಜೆಡಿಎಸ್ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷ ಕೂಡ ಆಂತರಿಕ ಸಮೀಕ್ಷೆ ನಡೆಸಿದ್ದು, ಶಿವಮೊಗ್ಗ ನಗರದಲ್ಲಿ – 5 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 12 ಸಾವಿರ, ಭದ್ರಾವತಿಯಲ್ಲಿ + 30 ಸಾವಿರ, ತೀರ್ಥಹಳ್ಳಿಯಲ್ಲಿ +13 ಸಾವಿರ, ಸೊರಬ +18 ಸಾವಿರ, ಶಿಕಾರಿಪುರದಲ್ಲಿ + 5 ಸಾವಿರ, ಸಾಗರದಲ್ಲಿ + 15 ಸಾವಿರ, ಬೈಂದೂರಿನಲ್ಲಿ + 5 ಸಾವಿರ ಮತಗಳು ಮಧು ಬಂಗಾರಪ್ಪ ಪರವಾಗಿ ಬರಲಿದೆ ಎಂದು ಜೆಡಿಎಸ್ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

Madhu Bangarappa General Image

ಮತ್ತೊಂದೆಡೆ ಬಿಜೆಪಿಯೂ ಆಂತರಿಕ ಸಮೀಕ್ಷೆಗಳನ್ನು ನಡೆಸಿದೆ. ಒಂದು ಸಮೀಕ್ಷೆಯ ಪ್ರಕಾರ, ಮೈತ್ರಿ ಅಭ್ಯರ್ಥಿಗಿಂತಲೂ ಬಿ.ವೈ.ರಾಘವೇಂದ್ರ ಶಿವಮೊಗ್ಗ ನಗರದಲ್ಲಿ +35 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 12 ಸಾವಿರ, ಭದ್ರಾವತಿಯಲ್ಲಿ – 6 ಸಾವಿರ, ತೀರ್ಥಹಳ್ಳಿಯಲ್ಲಿ + 14 ಸಾವಿರ, ಸೊರಬ – 8 ಸಾವಿರ, ಶಿಕಾರಿಪುರದಲ್ಲಿ + 12 ಸಾವಿರ, ಸಾಗರದಲ್ಲಿ – 8 ಸಾವಿರ, ಬೈಂದೂರಿನಲ್ಲಿ + 18 ಸಾವಿರ ಮತಗಳು ಲಭಿಸಲಿವೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2019

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment