Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಲೋಕಸಭೆ ಚುನಾವಣೆ ಸಮೀಕ್ಷೆ, ಗೆಲ್ಲೋದ್ಯಾರು? ಎಲ್ಲೆಲ್ಲಿ ಎಷ್ಟು ಮತ ಬರಲಿದೆ? BJP, JDS, ಕಾಂಗ್ರೆಸ್ ಸರ್ವೇಯಲ್ಲೇನಿದೆ?

ಶಿವಮೊಗ್ಗ ಲೋಕಸಭೆ ಚುನಾವಣೆ ಸಮೀಕ್ಷೆ, ಗೆಲ್ಲೋದ್ಯಾರು? ಎಲ್ಲೆಲ್ಲಿ ಎಷ್ಟು ಮತ ಬರಲಿದೆ? BJP, JDS, ಕಾಂಗ್ರೆಸ್ ಸರ್ವೇಯಲ್ಲೇನಿದೆ?

09/05/2019 6:52 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | 9 ಮೇ 2019

ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನುವ ಹಾಗೆ, ಚುನಾವಣೆ ಮುಗಿದರೂ, ಸೋಲು ಗೆಲುವಿನ ಲೆಕ್ಕಾಚಾರ ನಿಂತಿಲ್ಲ. ಮೇ 23ರಂದು ಮತ ಎಣಿಕೆ ನಡೆಯಲಿದೆ. ಅಲ್ಲಿಯವರೆಗೂ ಮತಗಣಿತ ನಡೆಯುತ್ತಲೇ ಇರುತ್ತದೆ.

ಲೋಕಸಭೆ ಚುನಾವಣೆ ಬಳಿಕ ಮೂರು ಪ್ರಮುಖ ಪಕ್ಷಗಳು ಸಮೀಕ್ಷೆ ನಡೆಸಿವೆ. ಬೂತ್ ಮಟ್ಟದಿಂದ ಲೆಕ್ಕಾಚಾರ ನಡೆದಿದ್ದು, ಅಂತಿಮ ವರದಿಯನ್ನು ಸಿದ್ಧಪಡಿಸಿಕೊಂಡಿವೆ. ಇದರ ಆಧಾರದ ಮೇಲೆಯೇ ಅಭ್ಯರ್ಥಿಗಳು ಮತ್ತು ಪಕ್ಷದ ಮುಖಂಡರು ಗೆಲುವು ತಮ್ಮದೇ ಎಂದು ಹೇಳಿಕೆ ನೀಡುತ್ತಿದ್ದಾರೆ.

ಯಾರಿಗೆ ಸೇರುತ್ತೆ ಎರಡು ಲಕ್ಷ ಮತ?

ಶಿವಮೊಗ್ಗ ಲೋಕಸಭೆಗೆ 2018ರಲ್ಲಿ ಉಪ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 5,43,306 ಮತ ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ 4,91,158 ಮತ ಗಳಿಸಿದ್ದರು. ಗೆಲುವಿನ ಅಂತರ 52,148 ಮತಗಳಾಗಿದ್ದವು.

ಉಪ ಚುನಾವಣೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ 77,388, ಜೆಡಿಎಸ್ 51,815 ಮತ ಪಡೆದಿದ್ದವು. ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ 67,899, ಬಿಜೆಪಿ 75,181, ಭದ್ರಾವತಿ ಕ್ಷೇತ್ರದಲ್ಲಿ ಜೆಡಿಎಸ್ 62,415, ಬಿಜೆಪಿ 51,469, ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ 58,105, ಬಿಜೆಪಿ 65,319, ಶಿಕಾರಿಪುರ ಕ್ಷೇತ್ರದಲ್ಲಿ ಜೆಡಿಎಸ್ 58,787, ಬಿಜೆಪಿ 77,570, ಸೊರಬ ತಾಲ್ಲೂಕು ಜೆಡಿಎಸ್ 68,605, ಬಿಜೆಪಿ 67,108, ಸಾಗರ ತಾಲ್ಲೂಕು ಜೆಡಿಎಸ್ 68,993, ಬಿಜೆಪಿ 60,526, ಬೈಂದೂರು ಜೆಡಿಎಸ್ 54,522, ಬಿಜೆಪಿ 68,992 ಮತ ಪಡೆದಿದ್ದವು.

Raghavendra BYR MP File Shot 1 1

ಉಪ ಚುನಾವಣೆ ಫಲಿತಾಂಶ ಗಮನಿಸಿದಾಗ, ಬಿಜೆಪಿ ಪಕ್ಷ ಭದ್ರಾವತಿ, ಸೊರಬ, ಸಾಗರದಲ್ಲಿ ಹಿನ್ನಡೆ ಅನುಭವಿಸಿದ್ದು ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿತ್ತು. ಉಪ ಚುನಾವಣೆಗೆ ಹೋಲಿಸಿದರೆ, ಈ ಬಾರಿ 2 ಲಕ್ಷ ಹೆಚ್ಚುವರಿ ಮತದಾನವಾಗಿದೆ. ಈ ಮತಗಳು ಯಾರ ಪಾಲಾಗಿವೆ ಎಂಬುದು ಸದ್ಯದ ಕುತೂಹಲ.

ಬೂತ್ ವಾರು ಪ್ರಚಾರ, ಸಮೀಕ್ಷೆ

ಜಿಲ್ಲೆಯಲ್ಲಿ ಬಿಜೆಪಿ, ಬೂತ್ ಮಟ್ಟದಿಂದಲೂ ಸಶಕ್ತವಾಗಿದೆ. ಇದುವೆ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ, ಬಿಜೆಪಿ ಗೆಲುವಿಗೆ ಕಾರಣ. ಈ ಬಾರಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಕೂಡ, ಬಿಜೆಪಿಯ ತಂತ್ರವನ್ನೇ ಅನುಸರಿಸಿ, ಬೂತ್ ಮಟ್ಟದಿಂದ ಪ್ರಚಾರ ನಡೆಸಿದವು. ಇನ್ನು, ಚುನಾವಣೆ ಮುಗಿಯುತ್ತಿದ್ದಂತೆ, ಬೂತ್ ಮಟ್ಟದಿಂದಲೇ ಮಾಹಿತಿ ತರಿಸಿಕೊಂಡು, ಸಮೀಕ್ಷೆ ನಡೆಸಲಾಗಿದೆ.

ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪ್ರತ್ಯೇಕವಾಗಿ ಆಂತರಿಕ ಸಮೀಕ್ಷೆ ನಡೆಸಿವೆ. ಒಂದೊಂದು ಸಮೀಕ್ಷೆಯೂ ಒಂದೊಂದು ರಿಪೋರ್ಟ್ ನೀಡಿವೆ. ಇದರ ಆಧಾರದ ಮೇಲೆಯೇ, ಆಯಾ ಪಕ್ಷದ ಮುಖಂಡರು, ತಮ್ಮ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ.

ಯಾವ್ಯಾವ ಪಕ್ಷದ ಸಮೀಕ್ಷೆಯಲ್ಲಿ ಏನೇನಿದೆ?

ಮಧು ಬಂಗಾರಪ್ಪಗೆ, ಶಿವಮೊಗ್ಗ ನಗರದಲ್ಲಿ ಬಿಜೆಪಿಗಿಂತಲೂ – 5 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 8 ಸಾವಿರ, ಭದ್ರಾವತಿಯಲ್ಲಿ + 25 ಸಾವಿರ, ತೀರ್ಥಹಳ್ಳಿಯಲ್ಲಿ +12 ಸಾವಿರ, ಸೊರಬ +18 ಸಾವಿರ, ಶಿಕಾರಿಪುರದಲ್ಲಿ + 5 ಸಾವಿರ, ಸಾಗರದಲ್ಲಿ + 20 ಸಾವಿರ, ಬೈಂದೂರಿನಲ್ಲಿ + 5 ಸಾವಿರ ಮತಗಳು ಮಧು ಬಂಗಾರಪ್ಪ ಪರವಾಗಿ ಬರಲಿದೆ ಎಂದು ಜೆಡಿಎಸ್ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷ ಕೂಡ ಆಂತರಿಕ ಸಮೀಕ್ಷೆ ನಡೆಸಿದ್ದು, ಶಿವಮೊಗ್ಗ ನಗರದಲ್ಲಿ – 5 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 12 ಸಾವಿರ, ಭದ್ರಾವತಿಯಲ್ಲಿ + 30 ಸಾವಿರ, ತೀರ್ಥಹಳ್ಳಿಯಲ್ಲಿ +13 ಸಾವಿರ, ಸೊರಬ +18 ಸಾವಿರ, ಶಿಕಾರಿಪುರದಲ್ಲಿ + 5 ಸಾವಿರ, ಸಾಗರದಲ್ಲಿ + 15 ಸಾವಿರ, ಬೈಂದೂರಿನಲ್ಲಿ + 5 ಸಾವಿರ ಮತಗಳು ಮಧು ಬಂಗಾರಪ್ಪ ಪರವಾಗಿ ಬರಲಿದೆ ಎಂದು ಜೆಡಿಎಸ್ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

Madhu Bangarappa General Image

ಮತ್ತೊಂದೆಡೆ ಬಿಜೆಪಿಯೂ ಆಂತರಿಕ ಸಮೀಕ್ಷೆಗಳನ್ನು ನಡೆಸಿದೆ. ಒಂದು ಸಮೀಕ್ಷೆಯ ಪ್ರಕಾರ, ಮೈತ್ರಿ ಅಭ್ಯರ್ಥಿಗಿಂತಲೂ ಬಿ.ವೈ.ರಾಘವೇಂದ್ರ ಶಿವಮೊಗ್ಗ ನಗರದಲ್ಲಿ +35 ಸಾವಿರ, ಶಿವಮೊಗ್ಗ ಗ್ರಾಮಾಂತರದಲ್ಲಿ + 12 ಸಾವಿರ, ಭದ್ರಾವತಿಯಲ್ಲಿ – 6 ಸಾವಿರ, ತೀರ್ಥಹಳ್ಳಿಯಲ್ಲಿ + 14 ಸಾವಿರ, ಸೊರಬ – 8 ಸಾವಿರ, ಶಿಕಾರಿಪುರದಲ್ಲಿ + 12 ಸಾವಿರ, ಸಾಗರದಲ್ಲಿ – 8 ಸಾವಿರ, ಬೈಂದೂರಿನಲ್ಲಿ + 18 ಸಾವಿರ ಮತಗಳು ಲಭಿಸಲಿವೆ ಎಂದು ತಿಳಿದುಬಂದಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | [email protected]

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ಶಿವಮೊಗ್ಗ – ಭದ್ರಾವತಿ KSRTC ಬಸ್ ದಿಢೀರ್ ತಪಾಸಣೆ, ಮಹಿಳೆ ಬಳಿಯಿದ್ದ ಖಾಕಿ ಪ್ಯಾಕೆಟ್ ತೆರದ ಪೊಲೀಸರಿಗೆ ಶಾಕ್
Next Article SORABA MAP GRAPHICS 1 BREAKING NEWS | ಸೊರಬ ಪಟ್ಟಣ ಪಂಚಾಯಿತಿ ಚುನಾವಣೆಗೆ ತಡೆ, ಪ್ರಕ್ರಿಯೆ ನಾಲ್ಕು ವಾರ ಮುಂದಕ್ಕೆ

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?