SHIVAMOGGA LIVE NEWS | 27 APRIL 2023
ELECTION NEWS : ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ (State Anthem) ಪ್ರಸಾರ ಮಾಡಲಾಗಿದೆ. ಕೂಡಲೆ ಮಧ್ಯೆ ಪ್ರವೇಶಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮಿಳುನಾಡು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿದರು.
ಶಿವಮೊಗ್ಗದ ಎನ್ಇಎಸ್ ಮೈದಾದನಲ್ಲಿ ತಮಿಳು ಸಮುದಾಯದ ಸಮಾವೇಶ ಆಯೋಜಿಸಲಾಗಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಾಮಾವೇಶ ಆರಂಭವಾಗುತ್ತಿದ್ದಂತೆ ತಮಿಳುನಾಡು ನಾಡಗೀತೆ (State Anthem) ಪ್ರಸಾರ ಮಾಡಲಾಯಿತು.
ಅರ್ಧಕ್ಕೆ ತಡೆದ ಈಶ್ವರಪ್ಪ
ಸಮಾವೇಶ ಆರಂಭವಾಗುತ್ತಿದ್ದಂತೆ ಆಯೋಜಕರು ನಾಡಗೀತೆ ಪ್ರಸರವಾಗಲಿದೆ ಎಂದು ಘೋಷಿಸಿದರು. ವೇದಿಕೆ ಮೇಲಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ, ಸೇರಿದಂತೆ ಬಿಜೆಪಿ ಪಾದಾಧಿಕಾರಿಗಳು ಕೂಡ ಎದ್ದು ನಿಂತರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಏ.28ಕ್ಕೆ ಬರಲಿದೆ ವಿಶೇಷ ವಿಮಾನ, ಬರ್ತಿರೋದ್ಯಾರು?
ತಮಿಳುನಾಡು ನಾಡಗೀತೆ ಪ್ರಸಾರ ಮಾಡಲಾಯಿತು. ಕೂಡಲೆ ಈಶ್ವರಪ್ಪ ಅವರು ಮೈಕ್ ಬಳಿ ತೆರಳಿ, ತಮಿಳು ನಾಡಗೀತೆಯನ್ನು ನಿಲ್ಲಿಸುವಂತೆ ಸೂಚಿಸಿದರು. ಅಲ್ಲದೆ ಯಾರಾದರೂ ಬಂದ ನಾಡಗೀತೆ ಹಾಡಿ ಎಂದು ತಿಳಿಸಿದರು. ಬಳಿಕ ಕರ್ನಾಟಕದ ನಾಡಗೀತೆಯನ್ನು ಹಾಕಲಾಯಿತು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200