ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021

ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ಹೆಸರು. ಈ ಕ್ಷೇತ್ರದಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ತಮ್ಮ ಬೌದ್ಧಿಕತೆ, ಸಮಜಾಮುಖಿ ಯೋಚನೆಗಳು, ಜನಪರ ಕಾಳಜಿಯುಳ್ಳ ಚರ್ಚೆಗಳಿಂದ ಜನಜನಿತರಾಗಿದ್ದಾರೆ.

ಅಷ್ಟೆ ಅಲ್ಲ, ಇಲ್ಲಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ಸರ್ವ ಜವಾಬ್ದಾರಿಗಳನ್ನು ನಿಭಾಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶಾಸಕರಾಗಿ ಮಾತ್ರವಲ್ಲ ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು.

ಯಾರೆಲ್ಲ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ?

ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಡಿದಾಳು ಮಂಜಪ್ಪ ಅವರು 1956ರಲ್ಲಿ ಮೈಸೂರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 73 ದಿನಗಳು ಕಡಿದಾಳು ಮಂಜಪ್ಪ ಅವರು ಆಡಳಿತ ನಡೆಸಿದ್ದರು.

1983ರಲ್ಲಿ ಆಯ್ಕೆಯಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ವಿಧಾನಸಭೆಯ ಸ್ಪೀಕರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. 1983 ರಿಂದ 1985ರವರೆಗೆ ಅವರು ಸ್ಪೀಕರ್ ಆಗಿದ್ದರು.

ಇದನ್ನೂ ಓದಿ | ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ

1989ರಲ್ಲಿ ತೀರ್ಥಹಳ್ಳಿಯಲ್ಲಿ ಪುನಃ ಗೆಲುವು ಕಂಡ ಡಿ.ಬಿ.ಚಂದ್ರೇಗೌಡ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿ ನಿಭಾಯಿಸಿದ್ದರು.

2013ರಲ್ಲಿ ಆಯ್ಕೆಯಾಗಿದ್ದ ಕಿಮ್ಮನೆ ರತ್ನಾಕರ್ ಅವರು ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಆರಗ ಜ್ಞಾನೇಂದ್ರ ಅವರು ಸಚಿವರಾಗಿದ್ದಾರೆ.

ಈವರೆಗೂ ಹನ್ನೊಂದು ಶಾಸಕರು

ತೀರ್ಥಹಳ್ಳಿ ಕ್ಷೇತ್ರದಿಂದ ಈವರೆಗೂ ಹನ್ನೊಂದು ಶಾಸಕರು ಆಯ್ಕೆಯಾಗಿದ್ದಾರೆ. ಮೈಸೂರು ರಾಜ್ಯವಿದ್ದಾಗ, ಮೊದಲ ವಿಧಾಸಭೆಗೆ ತೀರ್ಥಹಳ್ಳಿಯಿಂದ ಕಡಿದಾಳು ಮಂಜಪ್ಪ ಅವರು ಆಯ್ಕೆಯಾಗಿದ್ದರು.

ಕರ್ನಾಟಕ ರಾಜ್ಯ ರಚನೆಯಾದ ಬಳಿಕ ತೀರ್ಥಹಳ್ಳಿ ಕ್ಷೇತ್ರದಿಂದ 1957ರಲ್ಲಿ ಎ.ಆರ್.ಭದ್ರಿನಾರಾಯಣ, 1962ರಲ್ಲಿ ಶಾಂತವೇರಿ ಗೋಪಾಲ ಗೌಡ, 1967ರಲ್ಲಿ ಜಿ.ಜಿ.ಶಾಂತವೇರಿ, 1972ರಲ್ಲಿ ಕೋಣಂದೂರು ಲಿಂಗಪ್ಪ, 1978ರಲ್ಲಿ ಕಡಿದಾಳು ದಿವಾಕರ, 1983 ಮತ್ತು 1989ರಲ್ಲಿ ಡಿ.ಬಿ.ಚಂದ್ರೇಗೌಡ, 1985ರಲ್ಲಿ ಪಟ್ಮಕ್ಕಿ ರತ್ನಾಕರ್ ಆಯ್ಕೆಯಾಗಿದ್ದರು.

1994, 1999, 2004, 2018ರಲ್ಲಿ ಆರಗ ಜ್ಞಾನೇಂದ್ರ, 2008 ಮತ್ತು 2013ರಲ್ಲಿ ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದರು.

ತೀರ್ಥಹಳ್ಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಭಾರಿ ಶಾಸಕರಾದ ಹೆಗ್ಗಳಿಗೆ ಆರಗ ಜ್ಞಾನೇಂದ್ರ ಅವರದ್ದಾಗಿದೆ. ಈಗ ಸಚಿವ ಸ್ಥಾನ ಒಲಿದು ಬಂದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ಅವಕಾಶವಾಗಿದೆ.

228356916 1166811053798803 1965196841935063570 n.jpg? nc cat=101&ccb=1 3& nc sid=730e14& nc ohc=IFrJ5kF3EdYAX IFEOP& nc ht=scontent.fblr1 4

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment