SHIVAMOGGA LIVE NEWS | TRAFFIC | 10 ಮೇ 2022
ಬಿಜೆಪಿ ಸರ್ಕಾರದ ದುರಾಡಳಿತ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಜನಧ್ವನಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಗರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಹಾಗಾಗಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಜನರು ಟ್ರಾಫಿಕ್ ಸಮಸ್ಯೆ ಅನುಭವಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಅಶೋಕ ಸರ್ಕಲ್’ನಿಂದ ಅಮೀರ್ ಅಹಮದ್ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ಬಾಲರಾಜ ಅರಸ್ ರಸ್ತೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಮಧ್ಯಾಹ್ನದ ವೇಳೆಗೆ ಬಾಲರಾಜ ಅರಸ್ ರಸ್ತೆಯ ಭೋವಿ ಸಮುದಾಯ ಭವನದ ಮುಂದೆ ಸಮಾವೇಶ ನಡೆಸಲಾಯಿತು.
ಸಿಟಿಯಲ್ಲಿ ಟ್ರಾಫಿಕ್ ಜಾಮ್
ಬೆಳಗ್ಗೆಯಿಂದಲೇ ಅಶೋಕ ಸರ್ಕಲ್ ಬಳಿ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದರು. ಇದರಿಂದ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನು, ಪ್ರತಿಭಟನಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರದ ಮಾರ್ಗ ಬದಲಾಯಿಸಲಾಗಿತ್ತು. ಹಾಗಾಗಿ ವಾಹನ ಸವರರು ಸುತ್ತಿ ಬಳಸಿ ಓಡಾಡಬೇಕಾಯಿತು.
ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ಕುವೆಂಪು ರಸ್ತೆ ಸಾಗರ ರಸ್ತೆಯಲ್ಲಿ ಮೆರವಣಿಗೆ ಮತ್ತು ಪ್ರತಿಭಟನಾ ಸಮಾವೇಶದ ವೇಳೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ, ಹೇಗಿತ್ತು ಮೆರವಣಿಗೆ?