ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇಂದು ಸಂಜೆ 5:30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿರುವ ನ್ಯಾ. ಹೆಚ್.ಎಸ್. ನಾಗಮೋಹನ್ ದಾಸ್ ಅವರ ಮೆಮೊರೆಬಲ್ ಟ್ರಯಲ್ಸ್ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಸೊರಬಕ್ಕೆ ತೆರಳಲಿದ್ದು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಈ ಸುದ್ದಿಯನ್ನೂ ಓದಿ
ಜೆರಾಕ್ಸ್ ಮಾಡಿಸಲು ತೆರಳಿದ್ದ ವ್ಯಕ್ತಿ ಹತ್ಯೆ ಕೇಸ್, ಸ್ಥಳಕ್ಕೆ ಎಸ್ಪಿ ಭೇಟಿ, ಏನಿದು ಪ್ರಕರಣ?
ಸೆಪ್ಟೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಸೊರಬದ ಪ್ರವಾಸಿ ಮಂದಿರದಲ್ಲಿ ಉಳವಿ ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತಿವಾರು ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸೊರಬದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.