Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಾಳೆ ಮತದಾನ,‌ ನಾಲ್ವರು ಅಭ್ಯರ್ಥಿಗಳಿಗು ಢವಢವ, ಗುಂಡು, ತುಂಡು ಪಾರ್ಟಿ ವಿಡಿಯೋ ವೈರಲ್

ನಾಳೆ ಮತದಾನ,‌ ನಾಲ್ವರು ಅಭ್ಯರ್ಥಿಗಳಿಗು ಢವಢವ, ಗುಂಡು, ತುಂಡು ಪಾರ್ಟಿ ವಿಡಿಯೋ ವೈರಲ್

02/06/2024 11:06 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 2 JUNE 2024

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ‌(Voting) ಇನ್ನೊಂದೆ ದಿನ ಬಾಕಿ. ಬಹಿರಂಗ ಪ್ರಚಾರ ಮುಗಿದಿದ್ದು ಈಗ ಮನೆ ಮನೆ ಭೇಟಿ ಆರಂಭವಾಗಿದೆ. ಅಭ್ಯರ್ಥಿಗಳು, ಅವರ ಬೆಂಬಲಿಗರು ಮತದಾರರನ್ನು ನೇರವಾಗಿ ಸಂಪರ್ಕಿಸಿ ತಮ್ಮ ಪರ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷದಿಂದಲು ಬಂಡಾಯ ಅಭ್ಯರ್ಥಿಗಳು ಕಣಕ್ಕಿಳಿದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಎರಡೂ ಪಕ್ಷಕ್ಕೂ ಬಂಡಾಯದ ಬಿಸಿ

ayanuru%20manjunathaಆಯನೂರು ಮಂಜುನಾಥ್‌, ಕಾಂಗ್ರೆಸ್‌ : ಸಂಸತ್ತು ಮತ್ತು ವಿಧಾನ ಮಂಡಲದ ನಾಲ್ಕು ಸದನಗಳನ್ನು ಕಂಡವರು. ಅನುಭವಿ ರಾಜಕಾರಣಿ. ಕಳೆದ ಬಾರಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಗೆದ್ದಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ರಾಜೀನಾಮೆ ನೀಡಿದ್ದರು. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್‌ನ ಹುರಿಯಾಳು.


dhananjaya%20sarjiಡಾ. ಧನಂಜಯ ಸರ್ಜಿ, ಬಿಜೆಪಿ : ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ. ಸಂಘ ಪರಿವಾರದ ಹಿನ್ನೆಲೆ ಹೊಂದಿರುವವರು. ವಿಕಾಸ ಟ್ರಸ್ಟ್‌ನ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಳೆದೆರಡು ವರ್ಷದಿಂದ ಬಿಜೆಪಿಯಲ್ಲಿ ಸಕ್ರಿಯವಾಗಿದ್ದಾರೆ. ವೈದ್ಯ, ಸೌಮ್ಯ ಮಾತುಗಾರ ಎಂಬುದು ಇವರ ಪ್ಲಾಸ್‌ ಪಾಯಿಂಟ್‌.

nitin-30-lakh-views-copy


sp%20dineshಎಸ್‌.ಪಿ.ದಿನೇಶ್‌, ಪಕ್ಷೇತರ : ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಎರಡು ಬಾರಿ ಸ್ಪರ್ಧಿಸಿದ್ದರು. ಈ ಬಾರಿಯು ಟಿಕೆಟ್‌ ನಿರೀಕ್ಷೆಯಲ್ಲಿ ಕಳೆದೊಂದು ವರ್ಷದಿಂದಲೆ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದರು. ಕಡೆ ಕ್ಷಣದಲ್ಲಿ ಟಿಕೆಟ್‌ ಕೈ ತಪ್ಪಿದ್ದರಿಂದ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಪದವೀಧರರ ಸಹಕಾರ ಸಂಘದಲ್ಲಿ ಬಹು ವರ್ಷದಿಂದ ಸಕ್ರಿಯ. ವಿವಿಧ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.


raghupathi%20bhatರಘುಪತಿ ಭಟ್‌, ಪಕ್ಷೇತರ : ಮಾಜಿ ಶಾಸಕ. ರಾಜಕೀಯದಲ್ಲಿ ಅನುಭವ ಹೊಂದಿರುವವರು. ಬಿಜೆಪಿಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ಮತ್ತು ರಾಷ್ಟ್ರಭಕ್ತರ ಬಳಗದಿಂದ ಬೆಂಬಲ ಲಭಿಸಿದೆ.

ಪಕ್ಷಗಳಿಗೆ ಬಂಡಾಯದ್ದೇ ತಲೆನೋವು

ಕಾಂಗ್ರೆಸ್‌ ಪಕ್ಷಕ್ಕೆ ಎಸ್‌.ಪಿ.ದಿನೇಶ್‌ ಅವರ ಬಂಡಾಯದ ಸುಳಿವಿತ್ತು. ಹಾಗಾಗಿ ಕಾರ್ಯಕರ್ತರು ಆರಂಭದಿಂದಲು ಮಾನಸಿಕವಾಗಿ ಸಿದ್ಧವಾಗಿದ್ದರು. ಬಿಜೆಪಿಗೆ ಕೊನೆ ಕ್ಷಣದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಹಾಗಾಗಿ ಕಾಂಗ್ರೆಸ್‌ ಪಕ್ಷದ ಆಯನೂರು ಮಂಜುನಾಥ್‌ ಮತ್ತು ಬಿಜೆಪಿಯ ಡಾ. ಧನಂಜಯ ಸರ್ಜಿ ಹೆಚ್ಚಿವರಿ ಶ್ರಮ ಹಾಕಿ ಪ್ರಚಾರ ನಡೆಸುವುದು ಅನಿರ್ವಾಯವಾಗಿತ್ತು. ಬಂಡಾಯ ಅಭ್ಯರ್ಥಿಗಳಾದ ಎಸ್‌.ಪಿ.ದಿನೇಶ್‌ ಮತ್ತು ರಘುಪತಿ ಭಟ್‌ ಕೂಡ ಪಕ್ಷಗಳ ಅಭ್ಯರ್ಥಿಗಳಿಗೆ ಸರಿಸಮವಾಗಿಯೇ ಕ್ಯಾಂಪೇನ್‌ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಎಷ್ಟಿವೆ ಮತಗಟ್ಟೆ?

ನೈಋತ್ಯ ಪದವೀಧರರ ಕ್ಷೇತ್ರವು ಶಿವಮೊಗ್ಗ, ದಾವಣಗೆರೆಯ ಚನ್ನಗಿರಿ, ಹೊನ್ನಾಳಿ ತಾಲೂಕುಗಳು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 38 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸೊರಬದಲ್ಲಿ 2, ಶಿಕಾರಿಪುರದಲ್ಲಿ 3, ಸಾಗರದಲ್ಲಿ 4, ಹೊಸನಗರ 3, ಶಿವಮೊಗ್ಗ ಗ್ರಾಮಾಂತರ 4, ಶಿವಮೊಗ್ಗ ನಗರ 14, ತೀರ್ಥಹಳ್ಳಿ 2, ಭದ್ರಾವತಿಯಲ್ಲಿ 6 ಮತಗಟ್ಟೆ ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 27,412 ಮತದಾರರಿದ್ದಾರೆ.

ಗುಂಡು, ತುಂಡಿನ ಗುಸುಗುಸು

ಮತದಾರರಿಗೆ ಈ ಬಾರಿ ಗುಂಡು, ತುಂಡು ಪಾರ್ಟಿ ಕೊಡಲಾಗುತ್ತಿದೆ ಎಂದು ಆರಂಭದಿಂದ ಆರೋಪ ಕೇಳಿ ಬರುತ್ತಿತ್ತು. ಅಭ್ಯರ್ಥಿಗಳು, ಅವರ ಬೆಂಬಲಿಗರು ಪರಸ್ಪರರ ವಿರುದ್ಧ ಇದೇ ಆರೋಪ ಮಾಡುತ್ತಿದ್ದಾರೆ. ಈ ಮಧ್ಯೆ ಪಾರ್ಟಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಇದನ್ನೂ ಓದಿ – ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?

ನೈಋತ್ಯ ಪದವೀಧರರ ಕ್ಷೇತ್ರದ ಈ ಬಾರಿಯ ಚುನಾವಣೆ ಹಲವು ಹೊಸತನ, ಕುತೂಹಲ ಮತ್ತು ನೇರಾನೇರ ಟೀಕೆಗಳಿಗೆ ಸಾಕ್ಷಿಯಾಗಿದೆ. ಹಾಗಾಗಿ ಫಲಿತಾಂಶದತ್ತಲು ತೀವ್ರ ಕುತೂಹಲ ಮೂಡಿದೆ. ಅಲ್ಲದೆ, ಈ ಬಾರಿಯ ಸೋಲು, ಗೆಲುವು ಘಟಾನುಘಟಿಗಳ ರಾಜಕೀಯ ಭವಿಷ್ಯ ಬದಲಿಸುವ ಸಾಧ್ಯತೆ ಇದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Jewels-Theft-at-Shimoga-Gandhi-Bazaar. ಆಭರಣ ಅಂಗಡಿಯಿಂದ ಗಡಿಬಿಡಿಯಲ್ಲಿ ಹೊರಹೋದ ನಾಲ್ವರು, ಸಿಸಿಟಿವಿ ಪರಿಶೀಲಿಸಿದಾಗ ಮಾಲೀಕರಿಗೆ ಶಾಕ್
Next Article WEATHER-REPORT-SHIMOGA- ಶಿವಮೊಗ್ಗದಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?