SHIVAMOGGA LIVE NEWS | SHIMOGA | 15 ಏಪ್ರಿಲ್ 2022
ನಿರ್ದೋಷಿಯಾಗಿ ಬರುತ್ತೇನೆ. ಮತ್ತ ಮಂತ್ರಿ ಆಗಿಯೇ ಆಗುತ್ತೇನೆ. ಇದು ಸಚಿವ ಕೆ.ಎಸ್.ಈಶ್ವರಪ್ಪ ಅವರ ಭರವಸೆಯ ಮಾತುಗಳು.
ಶಿವಮೊಗ್ಗ ನಗರ ಬಿಜೆಪಿ ಕಾರ್ಯಾಲಯ ಉದ್ಘಾಟನಾ ಸಮಾರಂಭದ ವೇಳೆ ಕಾರ್ಯಕರ್ತೆಯರು ಮತ್ತು ಅಭಿಮಾನಿಗಳು ಈಶ್ವರಪ್ಪ ಅವರನ್ನು ಸುತ್ತುವರೆದರು. ರಾಜೀನಾಮೆ ನೀಡದಂತೆ ಒತ್ತಾಯಿಸಿದರು.
ಕಣ್ಣೀರು ಹಾಕಿದ ಮಹಿಳೆಯರು
ಈಶ್ವರಪ್ಪ ಅವರನ್ನು ಸುತ್ತುವರೆದ ಮಹಿಳಾ ಅಭಿಮಾನಿಗಳು ರಾಜೀನಾಮೆ ಕೊಡಬೇಡಿ ಎಂದು ಮನವಿ ಮಾಡಿದರು. ಕೆಲವು ಮಹಿಳೆಯರು ಈಶ್ವರಪ್ಪ ಅವರ ಮುಂದೆ ಕಣ್ಣೀರು ಹಾಕಿದರು. ರಾಜೀನಾಮೆ ಕೊಡಬಾರದು ಎಂದು ಘೋಷಣೆ ಕೂಗಿದರು.
ಮತ್ತೆ ಮಂತ್ರಿಯಾಗಿ ಬರುತ್ತೇನೆ
ಈ ಸಂದರ್ಭ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಈಗ ನನ್ನ ಮೇಲೆ ಒಂದು ಆರೋಪ ಹೊರೆಸಿದ್ದಾರೆ. ನಾನು ಮಂತ್ರಿಯಾಗಿದ್ದರೆ ತನಿಖೆ ಮೇಲೆ ಪ್ರಭಾವ ಉಂಟಾಗಲಿದೆ ಅನ್ನುವ ಭಾವನೆ ಇರುತ್ತದೆ. ಅದಕ್ಕಾಗಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನಿರ್ದೋಷಿಯಾಗಿ ಬರುತ್ತೇನೆ. ಮತ್ತೆ ಮಂತ್ರಿ ಆಗಿಯೇ ಆಗುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಟೈರ್’ಗೆ ಬೆಂಕಿ ಹಚ್ಚಿ ಆಕ್ರೋಶ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200