ಶಿವಮೊಗ್ಗ ಲೈವ್.ಕಾಂ | 27 ಫೆಬ್ರವರಿ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 77 ವರ್ಷ ಪೂರೈಸಿದ ಹಿನ್ನೆಲೆ, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ ವಿವಿಧ ದೇಗುಲಕ್ಕೆ ತೆರಳಿದ್ದ ಬಿ.ವೈ.ರಾಘವೇಂದ್ರ, ವಿಶೇಷ ಪೂಜೆ ಸಲ್ಲಿಸಿದರು.

ಸಂಭ್ರಮದ ಬರ್ತಡೆಗೆ ಬ್ರೇಕ್
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನ ಮತ್ತು ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಯೋಧರು ವೀರಮರಣವನ್ನಪ್ಪಿದ ಹಿನ್ನೆಲೆ, ಈ ಬಾರಿ ಹುಟ್ಟುಹಬ್ಬ ಆಚರಿಸದಿರಲು ಯಡಿಯೂರಪ್ಪ ನಿರ್ಧರಿಸಿದ್ದರು. ಹಾಗಾಗಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹಿನ್ನೆಲೆ, ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರಲಿಲ್ಲ.

ಅರಣ್ಯವಾಸಿಗಳನ್ನು ತೆರವುಗೊಳಿಸುವ ಸುಪ್ರೀ ಕೋರ್ಟ್ ಆದೇಶದ ವಿರುದ್ಧ, ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ಜಾಥಾ ಆಯೋಜಿಸಲಾಗಿತ್ತು. ಇದರ ಉದ್ಘಾಟನೆಗೆ ಆಗಮಿಸಿದ್ದ ಯಡಿಯೂರಪ್ಪ ಅವರಿಗೆ, ಬಿಜೆಪಿ ಮುಖಂಡರು ಮತ್ತು ಕೆಲವು ಪ್ರಮುಖರು ಪ್ರವಾಸಿ ಮಂದಿರದಲ್ಲಿ ಹೂಗುಚ್ಛ ನೀಡಿ, ಶುಭಕೋರಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





