ಶಿವಮೊಗ್ಗ ಲೈವ್.ಕಾಂ | 18 ಡಿಸೆಂಬರ್ 2018
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಅಂತಾ ಹೇಳುತ್ತ, ಆರು ತಿಂಗಳಾಗಿದೆ. ಸಾಲ ಮನ್ನಾ ಹೆಸರಲ್ಲಿ ಪ್ರಚಾರ ಪಡೆಯುತ್ತಿರುವ ಸಿಎಂ, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಂತಾ ಯಡಿಯೂರಪ್ಪ ಟೀಕಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಆರು ತಿಂಗಳಾದರೂ ರೈತರ ಸಾಲ ಮನ್ನಾ ಆಗಿಲ್ಲ. ಹಾಗಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದೆ. ರಾಷ್ಟ್ರೀಕೃತ ಬ್ಯಾಂಕ್’ಗಳಿಗೆ ಸರ್ಕಾರ, ಸಾಲ ಮನ್ನಾದ ಹಣ ಪಾವತಿ ಮಾಡದೆ ಇದ್ದರೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡುವುದಿಲ್ಲ ಎಂದರು.
ಪ್ರಸಾದಕ್ಕೆ ಅನುಮತಿ ಸರಿಯಲ್ಲ
ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ಹಂಚಲು ಸರ್ಕಾರದ ಅನುಮತಿ ಪಡೆಯಬೇಕು ಅನ್ನುವುದು ಸರಿಯಾದ ಕ್ರಮವಲ್ಲ. ಚಾಮರಾಜನಗರದ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣದಲ್ಲಿ, ಅಪಾರಾಧಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಆದರೆ ಆ ನೆಪದಲ್ಲಿ ಪ್ರಸಾದ ಹಂಚುವಾಗ ಸರ್ಕಾರದ ಅನುಮತಿ ಪಡೆಯಬೇಕು ಅನ್ನುವುದು ಸರಿಯಲ್ಲ ಅಂತಾ ಯಡಿಯೂರಪ್ಪ ಸರ್ಕಾರದ ನಡೆ ವಿರೋಧಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]