| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿಕಾರಿಪುರ ಪುರಸಭೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದರು.
ಯಡಿಯೂರಪ್ಪ ಪ್ರತಿಕ್ರಿಯೆಯ ಪ್ರಮುಖಾಂಶಗಳು
‘ನಾನು ಈಗಾಗಲೆ ಹೇಳಿದ್ದೇನೆ ಕನಿಷ್ಠ 15 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.’
‘ಶಿವಮೊಗ್ಗದಲ್ಲಿ ಡಿ.ಎಸ್.ಅರುಣ್ ಅವರು ಮುನ್ನೂರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮೊದಲ ಸುತ್ತಿನಲ್ಲೇ ಗೆಲುವು ಸಾಧಿಸುತ್ತಾರೆ. ಎಲ್ಲೆಡೆ ಮೊದಲ ಸುತ್ತಿನಲ್ಲೆ ಗೆಲ್ಲಬೇಕು ಎಂದು ಪ್ರಯತ್ನಿಸುತ್ತಿದ್ದೇವೆ.’
‘ನಮ್ಮಲ್ಲೆ ಮಂತ್ರಿಗಳು, ಶಾಸಕರು ಗೆಲುವಿಗಾಗಿ ಶ್ರಮಿಸಿದ್ದಾರೆ. ಕನಿಷ್ಠ 15 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ವಿಧಾನ ಪರಿಷತ್’ನಲ್ಲೂ ಬಿಜೆಪಿಗೆ ಬಹುಮತ ಸಿಗಲಿದೆ.’
![]()
‘ವಿರೋಧ ಪಕ್ಷದ ನಾಯಕರಿಗೆ ಪ್ರತಿಕ್ರಿಯೆ ನೀಡಿಲ್ಲ. ಮುಂದೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ಫಲಿತಾಂಶವೇ ಅವರಿಗೆ ಉತ್ತರವಾಗಲಿದೆ.’
‘ಇದು ಸ್ಥಳೀಯ ಸಂಸ್ಥೆಗಳಿಂದ ಆಗುವ ಚುನಾವಣೆ. ಇಲ್ಲಿ ನಾವು 15 ಸ್ಥಾನ ಗೆಲ್ಲುತ್ತೇವೆ. ಅದರ ಅರ್ಥ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗುತ್ತೆ. ಆದ್ದರಿಂದ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ.’
ಇನ್ನು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮುಖ್ಯಮಂತ್ರಿಗಳು ಅದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು. ವಿಜಯೇಂದ್ರ ಅವರಿಗೆ ಹೆಚ್ಚಿನ ಸ್ಥಾನಮಾನದ ಕುರಿತು ಚರ್ಚೆಗಳಿಗೆ ‘ಅದರ ವಿಜಯೇಂದ್ರ ಅವರೇನು ಅಪೇಕ್ಷೆ ಪಟ್ಟಿಲ್ಲ’ ಎಂದು ತಿಳಿಸಿದರು.
![]()
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()