‘ಕಾಂಗ್ರೆಸ್ ಧೂಳಿಪಟವಾಗಲಿದೆ’, ಯಡಿಯೂರಪ್ಪ ಭವಿಷ್ಯ, ಪರಿಷತ್ ಚುನಾವಣೆ ಬಗ್ಗೆ ಮಾಜಿ ಸಿಎಂ ಹೇಳಿಕೆಯ ಪ್ರಮುಖಾಂಶ ಇಲ್ಲಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ಶಿಕಾರಿಪುರ ಪುರಸಭೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದರು.

ಯಡಿಯೂರಪ್ಪ ಪ್ರತಿಕ್ರಿಯೆಯ ಪ್ರಮುಖಾಂಶಗಳು

‘ನಾನು ಈಗಾಗಲೆ ಹೇಳಿದ್ದೇನೆ ಕನಿಷ್ಠ 15 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.’

‘ಶಿವಮೊಗ್ಗದಲ್ಲಿ ಡಿ.ಎಸ್.ಅರುಣ್ ಅವರು ಮುನ್ನೂರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮೊದಲ ಸುತ್ತಿನಲ್ಲೇ ಗೆಲುವು ಸಾಧಿಸುತ್ತಾರೆ. ಎಲ್ಲೆಡೆ ಮೊದಲ ಸುತ್ತಿನಲ್ಲೆ ಗೆಲ್ಲಬೇಕು ಎಂದು ಪ್ರಯತ್ನಿಸುತ್ತಿದ್ದೇವೆ.’

‘ನಮ್ಮಲ್ಲೆ ಮಂತ್ರಿಗಳು, ಶಾಸಕರು ಗೆಲುವಿಗಾಗಿ ಶ್ರಮಿಸಿದ್ದಾರೆ. ಕನಿಷ್ಠ 15 ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ವಿಧಾನ ಪರಿಷತ್’ನಲ್ಲೂ ಬಿಜೆಪಿಗೆ ಬಹುಮತ ಸಿಗಲಿದೆ.’

shivamogga live subscribe band

‘ವಿರೋಧ ಪಕ್ಷದ ನಾಯಕರಿಗೆ ಪ್ರತಿಕ್ರಿಯೆ ನೀಡಿಲ್ಲ. ಮುಂದೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ಫಲಿತಾಂಶವೇ ಅವರಿಗೆ ಉತ್ತರವಾಗಲಿದೆ.’

‘ಇದು ಸ್ಥಳೀಯ ಸಂಸ್ಥೆಗಳಿಂದ ಆಗುವ ಚುನಾವಣೆ. ಇಲ್ಲಿ ನಾವು 15 ಸ್ಥಾನ ಗೆಲ್ಲುತ್ತೇವೆ. ಅದರ ಅರ್ಥ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗುತ್ತೆ. ಆದ್ದರಿಂದ ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರ ಹಿಡಿಯಲು ಈ ಚುನಾವಣೆ ನಾಂದಿ ಹಾಡಲಿದೆ.’

ಇನ್ನು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮುಖ್ಯಮಂತ್ರಿಗಳು ಅದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು. ವಿಜಯೇಂದ್ರ ಅವರಿಗೆ ಹೆಚ್ಚಿನ ಸ್ಥಾನಮಾನದ ಕುರಿತು ಚರ್ಚೆಗಳಿಗೆ ‘ಅದರ ವಿಜಯೇಂದ್ರ ಅವರೇನು ಅಪೇಕ್ಷೆ ಪಟ್ಟಿಲ್ಲ’ ಎಂದು ತಿಳಿಸಿದರು.

ADVT JULY NANJAPPA HOSPITAL HOME LAB TESTING

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 10, 2021

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

Leave a Comment