ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ಸಿಗಂದೂರು ದೇವಸ್ಥಾನದ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೇವಿಯ ಶಾಪ ತಟ್ಟಿದೆ. ಸಂಕ್ರಾಂತಿ ಕಳೆಯುತ್ತಿದ್ದಂತೆ ಅವರು ರಾಜೀನಾಮೆ ನೀಡುವಂತಾಗುತ್ತದೆ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರಿಗೆ ಸಿಗಂದೂರು ದೇವಿಯ ಶಾಪ ಮತ್ತು ಅವರ ಪಕ್ಷದ ಶಾಸಕರ ಶಾಪ ತಟ್ಟಿದೆ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಲಿದೆ ಎಂದರು.
ಹೆಗಲೇರಿದ ಡಿನೋಟಿಫೈ ಹಗರಣ
ಸಿಗಂದೂರು ದೇವಿಯ ಶಾಪದ ಪರಿಣಾಮ ಡಿನೋಟಿಫೈ ಹಗರಣ ಯಡಿಯೂರಪ್ಪ ಅವರ ಬೆನ್ನಿಗೇರಿದೆ. ಇದೇ ರೀತಿಯ ಪ್ರಕರಣದಲ್ಲಿ ಯಡಿಯೂರಪ್ಪ ಅವರು ಜೈಲಿಗೆ ಹೋಗಿದ್ದರು. ಈಗ ಮತ್ತೊಮ್ಮೆ ಅದೇ ರೀತಿಯ ಸ್ಥಿತಿ ಬಂದಿದೆ. ಹಾಗಾಗಿ ಸಂಕ್ರಾಂತಿ ಹಬ್ಬದ ಬಳಿಕ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗುತ್ತದೆ.
ಶಾಸಕರ ಶಾಪವು ತಟ್ಟುತ್ತಿದೆ
ಉತ್ತರ ಕರ್ನಾಟಕದ ಕೆಲವು ಶಾಸಕರ ಶಾಪವು ಯಡಿಯೂರಪ್ಪ ಅವರಿಗೆ ತಟ್ಟುತ್ತಿದೆ. ಅವರು ಪ್ರತ್ಯೇಕ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಯೋಚಿಸುತ್ತಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಅಂತಾ ಬೇಳೂರು ಗೋಪಾಲಕೃಷ್ಣ ಹೇಳಿದರು.
VIDEO REPORT
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















