SHIVAMOGGA LIVE NEWS | 17 JANUARY 2023
SHIMOGA | ಅಭಿವೃದ್ಧಿಗಿಂತಲು ಧರ್ಮವೆ ದೊಡ್ಡದು ಎಂದು ಹೇಳುವ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಯಾವುದಾರು ಮಠದ ಧರ್ಮದರ್ಶಿಯಾಗಲಿ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್ ಟೀಕಿಸಿದರು. (comment)
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈ.ಹೆಚ್.ನಾಗರಾಜ್ ಅವರು, ಬ್ರಿಟೀಷರ ಕಾಲದಿಂದಲು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ ಧರ್ಮ ಉಳಿಸುವುದು ಇಂದಿನ ಅಗತ್ಯತೆಯಾಗಿದೆ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ. ಧರ್ಮ ಉಳಿಸುವ ಆಸಕ್ತಿ ಇದ್ದರೆ ಈಶ್ವರಪ್ಪ ಅವರು ಯಾವುದಾದರು ಮಠಕ್ಕೆ ಧರ್ಮದರ್ಶಿಯಾಗಲಿದೆ ಎಂದರು. (comment)
ಜ್ಯೋತಿಷಿ ಆಗುವುದು ಉತ್ತಮ
ಶಾಸಕ ಕೆ.ಎಸ್.ಈಶ್ವರಪ್ಪ ಅವರು ಈಚೆಗೆ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದರು ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಸಿಕ್ಕಿದೆ. ಆದರೆ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರ ಇನ್ನೂ ಗ್ಯಾರಂಟಿಯಾಗಿಲ್ಲ. ಕ್ಷೇತ್ರ ಕಳೆದುಕೊಳ್ಳುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದ ಈ ಅಂಗಡಿಯ ಬಟ್ಟೆ ಆರೋಗ್ಯ ಕಾಪಾಡುತ್ತೆ, ಇದಕ್ಕೆ ವಿದೇಶದಲ್ಲೂ ಇದೆ ಭಾರಿ ಬೇಡಿಕೆ, ಎಲ್ಲಿದೆ ಅಂಗಡಿ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200