SHIVAMOGGA LIVE NEWS, 10 FEBRUARY 2025
ಶಿವಮೊಗ್ಗ : ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಮಾಡಿ ಜಿಲ್ಲಾಧ್ಯಕ್ಷ (President) ಸ್ಥಾನದ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಯುವ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ತಿಳಿಸಿದರು.
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಾಧಿಕಾರಿಗಳು ಇವತ್ತು ಪತ್ರಿಕಾಗೋಷ್ಠಿ ನಡೆಸಿದರು. ಚುನಾವಣೆ ಕುರಿತು ಮಾಹಿತಿ ನೀಡಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಚುನಾವಣೆ ಸಂದರ್ಭ ಸಂಘಟನೆ ಮಾಡುವಾಗ ಇದ್ದ ಉತ್ಸಾಹವೆ ಮುಂದೆಯು ಇರಬೇಕು. ವಿವಿಧ ಸ್ಥಾನಗಳಿಗೆ ಆಯ್ಕೆಯಾದವರು, ಸೋತವರು ಒಟ್ಟಿಗೆ ಸಂಘಟನೆಯಲ್ಲಿ ತೊಡಗಲಿದ್ದಾರೆ.
• ಆರ್.ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಈ ಬಾರಿ ಆನ್ಲೈನ್ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಸಿ ಮತದಾನ ಮತ್ತು ಮತ ಎಣಿಕೆ ಮಾಡಲಾಗಿದೆ. ಅರ್ಹ ಮತ್ತು ಸಮರ್ಪಕ ದಾಖಲೆಗಳನ್ನು ಅಪ್ಲೋಡ್ ಮಾಡಿದವರಿಗೆ ಮತದಾನ ಮಾಡಲು ಅವಕಾಶವಿತ್ತು. ಸೇವೆ, ಸಿದ್ಧಾಂತ ಮತ್ತು ಸಂಘಟನೆ ಯುವ ಕಾಂಗ್ರೆಸ್ನ ಧ್ಯೇಯ. ಈಗ ಆಯ್ಕೆಯಾದವರು ಈ ಧ್ಯೇಯದಂತೆ ಕೆಲಸ ಮಾಡಲಿದ್ದಾರೆ.
• ಆದರ್ಶ ಹುಂಚದಕಟ್ಟೆ, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ
ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾಗಿತ್ತು. ಸದಸ್ಯತ್ವ ಮಾಡಿಸಿದ್ದೆವು. ಫೆ.7ರಂದು ಫಲಿತಾಂಶ ಪ್ರಕಟವಾಗಿದೆ. ಅತಿ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಪಕ್ಷದ ಅಧ್ಯಕ್ಷರು, ಹಿರಿಯರ ಸಲಹೆ ಪಡೆದು ಉತ್ತಮ ಕೆಲಸ ಮಾಡುತ್ತೇವೆ.
• ಹರ್ಷಿತ್ ಗೌಡ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಪ್ರಮುಖರಾದ ವಿಜಯ ಕುಮಾರ್, ಹೆಚ್.ಸಿ.ಯೋಗೇಶ್, ಮಧುಸೂದನ್, ಚೇತನ್, ಯುವ ಕಾಂಗ್ರೆಸ್ಗೆ ಆಯ್ಕೆಯಾದ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ » ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200