ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಶಿವಮೊಗ್ಗದ ಪ್ರತಿ ಅಂಗಡಿಗು ತೆರಳಿ ಬಂದ್ಗೆ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು.
ರೈತ ಸಂಘ, ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಶಿವಮೊಗ್ಗದಲ್ಲಿ ಬಂದ್ಗೆ ಬಂಬಲ ನೀಡುವಂತೆ ಮೆರವಣಿಗೆ ಮಾಡಿದರು. ಪ್ರತಿ ಅಂಗಡಿಗು ತೆರಳಿ ಬಂದ್ನ ಉದ್ದೇಶ ವಿವರಿಸಿ, ಕರಪತ್ರ ನೀಡಿ ಮನವಿ ಮಾಡಿದರು.
https://www.facebook.com/liveshivamogga/videos/340988687245307/?t=0
ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರೂ ರೋಡ್, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಮೆರವಣಿಗೆ ನಡೆಯಿತು. ರೈತ ಸಂಘದ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ, ಪ್ರಗತಿಪರ ಸಂಘಟನೆ ಪ್ರಮುಖ ಕೆ.ಎಲ್.ಅಶೋಕ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]