ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ಸಂವಿಧಾನ ವಿರೋಧಿಯಾಗಿರುವ ಎಬಿವಿಪಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಸ್ಟೂಡೆಂಟ್ ಯುನಿಯನ್ ಮೂಮ್ಮೆಂಟ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲದಯಲ್ಲಿ ದಾಳಿ ನಡೆಸಿ, ವಿದ್ಯಾರ್ಥಿಗಳ ಮೇಲೆ ಹೆಲ್ಲೆ ನಡೆಸಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸಿದ್ದಕ್ಕೆ ಈ ದಾಳಿ ಮಾಡಲಾಗಿದೆ.
ಎಬಿವಿಪಿ ಸಂಘಟನೆಯು ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ. ಹಾಗಾಗಿ ಆ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]