ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ದೆಹಲಿಯಲ್ಲಿ ಆಕ್ಸಿಜನ್ ಮ್ಯಾನ್ ಎಂದು ಖ್ಯಾತರಾಗಿರುವ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಇದನ್ನು ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಮೌನ ಪ್ರತಿಭಟನೆ ನಡೆಸಲಾಯಿತು.
ಕರೋನ ತಡೆಗೆ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನ್ಯಾಯಾಲಯಗಳೆ ಇದನ್ನು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಅವರು ಕರೋನ ಸೋಂಕಿತರಿಗೆ ನೆರವು ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದೆ ದೆಹಲಿ ಪೊಲೀಸರನ್ನು ಮುಂದೆ ಬಿಟ್ಟು, ವಿಚಾರಣೆ ನಡೆಲಾಗುತ್ತಿದೆ. ಇದು ಖಂಡನೀಯ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು, ಪೊಲೀಸರು ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪ್ರತಿಭಟನಾಕಾರರನ್ನು ತಡೆದರು. ಅದರೆ ಘೋಷಣೆ ಕೂಗುವುದಿಲ್ಲ, ಮೆರವಣಿಗೆ ನಡೆಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು. ಕೊನೆಗೆ ಮೌನ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ಕಾರ್ಪೊರೇಟರ್ ರಮೇಶ್ ಹೆಗ್ಡೆ, ಯುವ ಕಾಂಗ್ರೆಸ್ ಮುಖಂಡರಾದ ಚೇತನ್ ಗೌಡ, ಮಧುಸೂದನ್, ದೀಪಕ್ ಸಿಂಗ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]