SHIVAMOGGA LIVE NEWS | 11 SEPTEMBER 2023
SAGARA : ವಾಹನಗಳ ಮೇಲಿನ ಪೂರ್ಣಾವಧಿ ತೆರಿಗೆ (Vehicle Tax) ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ವಾಹನ ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ಸಾಗರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಮಹಾ ಗಣಪತಿ ದೇವಸ್ಥಾನದಿಂದ ಪ್ರದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಹಲವು ಲಘು ವಾಹನಗಳು ಮೆರವಣಿಗೆಯಲ್ಲಿದ್ದವು.
ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಶಿವಮೊಗ್ಗ ಜಿಲ್ಲೆಯಲ್ಲಿ 241 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ
ಸರಕು ಸಾಗಣೆ ಮತ್ತು ಇತರೆ ವಾಹನಗಳಿಗೆ ಜೀವಾವಧಿ ತೆರಿಗೆ (Vehicle Tax) ವಿಧಿಸಲಾಗಿದೆ. ಇದು ಅತ್ಯಂತ ದುಬಾರಿಯಾಗಿದೆ. 15 ವರ್ಷದ ವಾಹನಗಳನ್ನು ಗುಜರಿಗೆ ಹಾಕುವಂತೆ ಆದೇಶ ಹೊರಡಿಸಲಾಗಿದೆ. ಈ ಆದೇಶಗಳಿಂದ ವಾಹನ ಮಾಲೀಕರು, ಚಾಲಕರು, ಕ್ಲೀನರ್, ಮೆಕಾನಿಕ್ ಸೇರಿದಂತೆ ಹಲವರ ಜೀವನ ನಿರ್ವಹಣೆಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಈ ನೀತಿಗಳನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಐ.ವಿ.ಹೆಗಡೆ, ಬಾಳೆಕಾಯಿ ಚಂದ್ರಣ್ಣ, ವಿರೂಪಾಕ್ಷ ಸಾಗರ, ಪ್ರಕಾಶ್ ಭಟ್, ಪ್ರಭು, ಪ್ರಕಾಶ್ ಅಶೋಕ್, ಮಂಜುನಾಥ್ ಸೇರಿದಂತೆ ಇನ್ನಿತರರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರಿನ ಚಕ್ರದ ಮೇಲೆ ಮೂತ್ರ ವಿಸರ್ಜಿಸಿದ ಬೀದಿ ನಾಯಿ, ಕೈ ಕೈ ಮಿಲಾಯಿಸಿದ ಎರಡು ಕುಟುಂಬ