ಶಿವಮೊಗ್ಗ ಲೈವ್.ಕಾಂ | SHIMOGA | 28 ಮಾರ್ಚ್ 2020
ಇವತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡಿಸಲಾಯಿತು. ಆದರೆ ಬಜೆಟ್’ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದವು. ಅಲ್ಲದೆ ಬಜೆಟ್ ಸಭೆಯಿಂದ ಹೊರ ನಡೆದು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರೋನ ಸೋಂಕು ಹರಡುವ ಭೀತಿ ಹಿನ್ನೆಲೆ ದೇಶಾದ್ಯಂತ ಶಟ್’ಡೌನ್ ಮಾಡಲಾಗಿದೆ. ಯಾವುದೆ ಸಭೆ, ಸಮಾರಂಭ ನಡೆಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಹೀಗಿದ್ದೂ ಬಜೆಟ್ ಮಂಡಿಸಿ, ಹೆಚ್ಚು ಹೊತ್ತು ಸಭೆ ನಡೆಸುವುದು ಸರಿಯಲ್ಲ. ಆದ್ದರಿಂದ ಮೂರು ತಿಂಗಳ ಲೇಖಾನುದಾನ ಮಂಡಿಸಬೇಕು. ಆ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಪಕ್ಷದ ಸದಸ್ಯರ ಒತ್ತಾಯಕ್ಕೆ ಮಣಿಯದೆ ಬಜೆಟ್ ಮಂಡಿಸಲಾಯಿತು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸಭಾ ತ್ಯಾಗ ಮಾಡಿದರು.
ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್’ನ ಕಾರ್ಪೊರೇಟರ್’ಗಳು ಸಭಾತ್ಯಾಗ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]