SHIVAMOGGA LIVE NEWS | 11 ಮಾರ್ಚ್ 2022
ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ.
ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು
ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ ಕುಟುಂಬದವರು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದಾರೆ. ಆದರೆ ಈ ತನಕ ಯಾವುದ ಪ್ರಯೋಜನವಾಗಿಲ್ಲ. ಆಕ್ರೋಶಗೊಂಡು ಕುಟುಂಬದವರು ಸತ್ಯಾಗ್ರಹದ ಹಾದಿ ಹಿಡಿದಿದ್ದಾರೆ.
ಶಾಂತಿಯುತ ಪ್ರತಿಭಟನೆ
ಸುರಗಿತೋಪಿನ ಸುಮಾರು 20 ಕುಟುಂಬಗಳು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಮ್ಮ ಸಮಸ್ಯೆಗೆ ಪರಿಹಾರ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200