ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 APRIL 2023
SHIMOGA : ಕಾಂಗ್ರೆಸ್ ಕಚೇರಿ ಮುಂದೆ ಇವತ್ತೂ ಪ್ರತಿಭಟನೆ (Protest) ನಡೆಯಿತು. ಟೈರ್ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆಗಳನ್ನು ಕೂಗಿ ತಮ್ಮ ಸಿಟ್ಟು ಹೊರ ಹಾಕಿದರು.
ಶಿವಮೊಗ್ಗ ನಗರ ಕ್ಷೇತ್ರಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಟಿಕಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕಟ್ ಕೈ ತಪ್ಪಿದ್ದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಚೇರಿ ಮುಂದೆ ಹಠಾತ್ ಜಮಾವಣೆಯಾದ ಬೆಂಬಲಿಗರು ಪ್ರತಿಭಟನೆ (Protest) ನಡೆಸಿದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಟೈರ್ಗೆ ಬೆಂಕಿ ಹಚ್ಚಿದರು
ಪ್ರತಿಭಟನೆ ವೇಳೆ ಮಾತನಾಡಿದ ದಕ್ಷಿಣ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಹಮತ್, ʼಸುಂದರೇಶ್ ಅವರಿಗೆ ಟಿಕೆಟ್ ಸಿಗುವ ಆಶಾಭಾವನೆ ಇತ್ತು. ಸಾಲು ಸಾಲು ಹೋರಾಟಗಳನ್ನು ಮಾಡಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿದ್ದರು. ಅವರಿಗೆ ಟಿಕೆಟ್ ಕೊಡದಿರುವುದು ಬೇಸರ ಮೂಡಿಸಿದೆ. ಕೆಪಿಸಿಸಿ ಮತ್ತು ಎಐಸಿಸಿ ಘಟಕ ಈ ಕೂಡಲೆ ಅಭ್ಯರ್ಥಿ ಬದಲಾವಣೆ ಮಾಡಬೇಕುʼ ಎಂದು ಆಗ್ರಹಿಸಿದರು.
ಇದನ್ನೂ ಓದಿ – ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈಶ್ವರಪ್ಪ, ಏನಿದೆ ಅದರಲ್ಲಿ?
ಇದೆ ವೇಳೆ ಕಾಂಗ್ರೆಸ್ ಕಚೇರಿ ಮುಂಭಾಗ ಟೈರ್ಗೆ ಬೆಂಕಿ ಹಚ್ಚಿದ ಸುಂದರೇಶ್ ಬೆಂಬಲಿಗರು ಘೋಷಣೆ ಕೂಗಿದರು.
ಶಿವಮೊಗ್ಗ ಲೈವ್.ಕಾಂ